Mysore
23
overcast clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

ಪರಿಷತ್‌ ಚುನಾವಣೆ: ಅವಿರೋಧವಾಗಿ ಆಯ್ಕೆಯಾದ ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು: ಇದೇ ಜೂನ್‌ 13ರಂದು ನಡೆಯಲಿರುವ ವಿಧಾನ ಪರಿಷತ್‌ ಆಯ್ಕೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ನ 7 ಸ್ಥಾನಗಳ ಪೈಕಿ ಒಂದು ಸ್ಥಾನಕ್ಕೆ ಯತೀಂದ್ರ ಸಿದ್ದರಾಮಯ್ಯ ಅವರು ಆಯ್ಕೆಯಾಗುವುದು ಖಚಿತ ಎಂದು ವರದಿಯಾಗಿದೆ.

ಯತೀಂದ್ರ ಅವರ ಉಮೇದುವಾರಿಕೆಯನ್ನು ಗುರುವಾರ ನವದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ಮ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಪಕ್ಷ ಅನುಮೋದಿಸಿದೆ.

ಉಳಿದ 6 ಕ್ಷೇತ್ರಗಳಿಗೆ ಪೈಪೋಟಿ ಹೆಚ್ಚಾಗಿದೆ. ಈ ಸ್ಥಾನಗಳಲ್ಲಿ ಮೈಸೂರು ಭಾಗದ ಪುಷ್ಪ ಅಮರನಾಥ್‌ ಅವರು ಪ್ರಬಲ ಆಕಾಂಕ್ಷಿಯಾಗಿದ್ದಾರೆ.

ಈ ಪಟ್ಟಿಯನ್ನು ಸಿಎಂ ಮತ್ತು ಡಿಸಿಎಂ ಅವರು ಸಿದ್ದಪಡಿಸಿದ್ದು, ಇಂದು ಅಥವಾ ನಾಳೆ ಅಧಿಕೃತ ಪಟ್ಟಿ ಬಿಡುಗಡೆಯಾಗಲಿದೆ ಎಂದು ಕಾಂಗ್ರೆಸ್‌ ಉನ್ನತ ಮೂಲಗಳು ತಿಳಿಸಿವೆ.

ಈ ಬಾರಿ 7 ಸ್ಥಾನಗಳಿಗೆ 65 ಮಂದಿ ಆಕಾಂಕ್ಷಿಗಳ ಶಾರ್ಟ್‌ ಲಿಸ್ಟ್‌ ಪಟ್ಟಿ ಸಿದ್ದಪಡಿಸಲಾಗಿದೆ. ಇದರಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ತಮ್ಮ ಕ್ಷೇತ್ರ ಬಿಟ್ಟುಕೊಟ್ಟ ಯತೀಂದ್ರಗೆ ಮುಂದಿನ ದಿನಗಳಲ್ಲಿ ಉನ್ನತ ಸ್ಥಾನಮಾನ ನೀಡುವುದಾಗಿ ಕಾಂಗ್ರೆಸ್‌ ಹೈಕಮಾಂಡ್‌ ಹೇಳಿತ್ತು. ಅದರಂತೆ ಯತೀಂದ್ರ ಅವರಿಗೆ ಟಿಕೆಟ್‌ ಪಟ್ಟ ಎನ್ನಲಾಗಿದೆ.

Tags:
error: Content is protected !!