ಬೆಂಗಳೂರು: ಇಂದು (ಜೂನ್.4) ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ರಾಜ್ಯದಲ್ಲಿ ಬಿಜೆಪಿ ಮೊದಲ ಖಾತೆ ತೆರೆದಿದ್ದು, ಉತ್ತರ ಕನ್ನಡದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಬಹುತೇಕ ಗೆಲುವು ದಾಖಲಿಸಲಿದ್ದಾರೆ.
ಉತ್ತರ ಕನ್ನಡದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ವಿರುದ್ಧ 2 ಲಕ್ಷ ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ.
ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಈವರೆಗೆ 576127 ಲಕ್ಷ ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಅವರು 316345 ಮತ ಪಡೆದು ಹಿನ್ನಡೆ ಸಾಧಿಸುವ ಮೂಲಕ ಸೋಲು ಕಂಡಿದ್ದಾರೆ. ಈ ಇಬ್ಬರ ನಡುವಿನ ಅಂತರ ಬರೋಬ್ಬರಿ 259782 ಮತಗಳಿವೆ.