Mysore
24
mist

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಮೈಸೂರಿನ ಭಾಗದಲ್ಲಿ ಈ ದಿನದಂದು ಲೋಕಯುಕ್ತ ಅಧಿಕಾರಿಗಳಿಂದ ದೂರು ಸ್ವೀಕಾರ ಸಭೆ

ಮೈಸೂರು:  ಅಧಿಕಾರಿಗಳು ಸರ್ಕಾರಿ ಕಛೇರಿಗಳಲ್ಲಿ ಸಾರ್ವಜನಿಕರ ಅಧಿಕೃತ ಕೆಲಸಗಳ ಅನಗತ್ಯ ವಿಳಂಬ, ಲಂಚದ ಬೇಡಿಕೆ ಇತ್ಯಾದಿ ತೊಂದರೆಗಳನ್ನು ನೀಡುತ್ತಿರುವ ಬಗ್ಗೆ  ಸಂಬoಧಪಟ್ಟವರು ಅಗತ್ಯ ಮಾಹಿತಿಯೊಂದಿಗೆ ಲೋಕಯುಕ್ತ ಅಧಿಕಾರಿಗಳಿಗೆ ಜೂನ್‌ 12 ರಂದು ದೂರು ನೀಡಬಹುದು.

ಈ ಬಗ್ಗೆ ಮಾಹಿತಿ ನೀಡಿರುವ ಕರ್ನಾಟಕ ಲೋಕಾಯುಕ್ತ ಮೈಸೂರು ವಿಭಾಗದ  ಅಧಿಕಾರಿಗಳು,  ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಕ್ರಮಬದ್ಧವಾಗಿ ಭರ್ತಿಮಾಡಿದ ದೂರುಗಳನ್ನು ಪ್ರಮಾಣಪತ್ರಗಳನ್ನು ಅಗತ್ಯ ದಾಖಲಾತಿಗಳೊಡನೆ ದೂರು ಸ್ವೀಕರಿಸುವ ಕಾರ್ಯಕ್ರಮವನ್ನು ಜೂ.12 ರಂದು ಬೆಳಗ್ಗೆ 11 ಗಂಟೆಯಿoದ ಮದ್ಯಾಹ್ನ 1 ಗಂಟೆಯವರೆಗೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ತಾಲ್ಲೂಕು ಪಂಚಾಯಿತಿ ಕಾರ್ಯಾಲಯ, ಚಾಮಾರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ತಾಲ್ಲೂಕು ಕಚೇರಿ ಹಾಗೂ  ಕೊಡಗು ಜಿಲ್ಲೆಯ ಸೋಮವಾರ ಪೇಟೆ ತಾಲ್ಲೂಕು ಮತ್ತು ಮಡಿಕೇರಿ ತಾಲ್ಲೂಕು ಕಚೇರಿಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆ ಸಾರ್ವಜನಿಕರು, ಕರ್ತವ್ಯ ಲೋಪವೆಸಗುವ ಭ್ರಷ್ಟ ಸರ್ಕಾರಿ ಅಧಿಕಾರಿಗಳು ಅಥವಾ ನೌಕರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಈ ಅವಕಾಶವನ್ನು ಉಪಯೋಗಿಸಿಕೊಂಡು ದೂರುಗಳನ್ನು ನೀಡಬಹುದು ಎಂದು ಕರ್ನಾಟಕ ಲೋಕಾಯುಕ್ತ ಮೈಸೂರು ವಿಭಾಗದ ಪೊಲೀಸ್ ಅಧಿಕ್ಷಕರಾದ ಸಜೀತ್ ವಿ ಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags: