Mysore
18
few clouds

Social Media

ಭಾನುವಾರ, 15 ಫೆಬ್ರವರಿ 2026
Light
Dark

ವಯನಾಡ್‌ ಅಥವಾ ರಾಯ್‌ಬರೇಲಿ?: ಮೂರ್ನಾಲ್ಕು ದಿನಗಳಲ್ಲಿ ರಾಗಾ ತೀರ್ಮಾನ!

ನವದೆಹಲಿ: ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಎರಡು ಕ್ಷೇತ್ರಗಳಲ್ಲಿ ಜಯಗಳಿಸಿದ್ದಾರೆ. ತಾವು ಪ್ರತಿನಿಧಿಸಿರುವ ಈ ಎರಡು ಕ್ಷೇತ್ರಗಳಲ್ಲಿ ಯಾವುದನ್ನು ಪ್ರತಿನಿಧಿಸಲಿದ್ದಾರೆ ಎಂಬುದನ್ನು ಮುಂದಿನ ಮೂರ್ನಾಲ್ಕು ದಿನಗಳಲ್ಲಿ ನಿರ್ಧರಿಸಲಿದ್ದಾರೆ ಎಂದು ಕಾಂಗ್ರೆಸ್‌ ಪಕ್ಷದ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್‌ ಅವರು ತಿಳಿಸಿದ್ದಾರೆ.

ನವದೆಹಲಿಯಲ್ಲಿ ಇಂದು (ಜೂನ್‌.8) ನಡೆದ ಕಾಂಗ್ರೆಸ್‌ ಕಾರ್ಯಕಾರಿಣಿ ಸಭೆಯ ನಂತರ ಮಾತನಾಡಿದ ವೇಣುಗೋಪಾಲ್‌, ಯಾವುದೇ ಸಂದರ್ಭದಲ್ಲಿಯೂ ಸಹಾ ಇದೇ ಜೂನ್‌.17ರ ಒಳಗಾಗಿ ರಾಹುಲ್‌ ಗಾಂಧಿ ತಮ್ಮ ತೀರ್ಮಾನವನ್ನು ಪ್ರಕಟಿಸಲಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ರಾಹುಲ್‌ ಗಾಂಧಿ ಸತತ ಎರಡನೇ ಅವಧಿಗೆ ಕೇರಳದಿಂದ ಸಂಸದರಾಗಿ ಆಯ್ಕೆಯಾಗಿದ್ದಾರೆ. ಇತ್ತ ತಮ್ಮ ತಾಯಿ ಕ್ಷೇತ್ರ ರಾಯ್‌ಬರೇಲಿಯಲ್ಲಿ ಮೊದಲ ಬಾರಿ ಸ್ಪರ್ಧೆ ಮಾಡಿದ್ದು, ಇನ್ನು ಮೂರ್ನಾಲ್ಕು ದಿನಗಳಲ್ಲಿ ತಮ್ಮ ಅಂತಿಮ ನಿರ್ಧಾರವನ್ನು ಖಚಿತವಾಗಿ ತಿಳಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಭಾರತೀಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ವ್ಯಕ್ತಿ ಗರಿಷ್ಠ ಎರಡು ಕ್ಷೇತ್ರಗಳಲ್ಲಿ ನಿಲ್ಲಬಹುದಾಗಿದೆ. ಎರಡನ್ನೂ ಗೆದ್ದಲ್ಲಿ ಒಂದು ಪಕ್ಷವನ್ನು ಕೈಬಿಡಬೇಕಾಗುತ್ತದೆ. ಪರಿಣಾಮವಾಗಿ ತೆರವಾದ ಕ್ಷೇತ್ರಕ್ಕೆ ಉಪಚುನಾವಣೆ ನಡೆಸಲಾಗುತ್ತದೆ.

Tags:
error: Content is protected !!