Mysore
26
overcast clouds

Social Media

ಶನಿವಾರ, 15 ಆಗಸ್ಟ್ 2026
Light
Dark

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್‌ ಪೊಲೀಸ್‌ ಕಸ್ಟಡಿ ಇಂದಿಗೆ ಅಂತ್ಯ!

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ನಟ ದರ್ಶನ್‌ ಅವರ ವಿಚಾರಣಾ ದಿನ ಇಂದಿಗೆ ಅಂತ್ಯವಾಗಲಿದೆ. ಜೂನ್‌. 11ರಂದು ರೇಣುಕಾಸ್ವಾಮಿ ಹತ್ಯೆಯ ಸಂಬಂಧ ನಟ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಮಂದಿಯನ್ನು ಬಂಧಿಸಲಾಗಿತ್ತು. ಇದರಲ್ಲಿ ದರ್ಶನ್‌ ಆಪ್ತರೇ ಹೆಚ್ಚಾಗಿದ್ದರು ಎನ್ನುವುದು ವಿಶೇಷ.

ಸದ್ಯ ಅನ್ನಪೂರ್ಣೇಶ್ವರಿ ಠಾಣೆಯಲ್ಲಿ ವಿಚಾರಣಾ ಕೈದಿಯಾಗಿರುವ ನಟ ದರ್ಶನ್‌ ಅವರನ್ನು ಇಂದು ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸುವ ಸಾಧ್ಯತೆಗಳಿವೆ.

ಮೈಸೂರಿನಲ್ಲಿ ದರ್ಶನ್‌ ಬಂಧನವಾಗಿತ್ತು. ಇಂದು ಅವರ ನ್ಯಾಯಾಂಗ ಬಂಧನ ಅಂತಿಮವಾಗಿದ್ದು, ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯದಲ್ಲಿ ಇಂದು ವಿಚಾರಣೆ ನಡೆಯಲಿದೆ.

ಇತ್ತ ಪೊಲೀಸರು ದರ್ಶನ್‌ ಹಾಗೂ ಇತರ ಆರರೋಪಿಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಸಲು ಎಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಮತ್ತಷ್ಟು ದಿನ ತಮ್ಮ ಕಸ್ಟಡಿಗೆ ತೆಗೆದುಕೊಳ್ಳುವ ಮೂಲಕ ತನಿಖೆಯಲ್ಲಿ ಹೆಚ್ಚಿನ ಮಾಹಿತಿ ಕಲೆಹಾಕಲು ಮನವಿ ಮಾಡುತ್ತಾರೆ ಎನ್ನಲಾಗಿದೆ.

Tags:
error: Content is protected !!