Mysore
36
few clouds

Social Media

ಸೋಮವಾರ, 27 ಏಪ್ರಿಲ 2026
Light
Dark

ರಾಜ್ಯ ಸರ್ಕಾರದ ವಿರುದ್ಧ ತೈಲ ಬೆಲೆ ಖಂಡಿಸಿ ಬಿಜೆಪಿಯಿಂದ ಸೈಕಲ್‌ ಜಾಥಾ!

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದಿಂದ ದಿನ ಬಳಕೆಯ ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ದರ ಏರಿಕೆ ಮಾಡಿರುವ ಕುರಿತು ವಿರೋಧ ಪಕ್ಷವಾದ ಬಿಜೆಪಿಯಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.

ಈ ಸಂಬಂಧ ಇಂದು ರಾಜ್ಯ ರಾಜಧಾನಿಯಲ್ಲಿ ಬಿಜೆಪಿ ವಿನೂತನವಾಗಿ ಪ್ರತಭಟನೆ ನಡೆಸಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಇಂದು ಬಿಜೆಪಿ ಸೈಕಲ್‌ ಜಾಥಾ ನಡೆಸುವ ಮೂಲಕ ಸರ್ಕಾರದ ಬೆಲೆಏರಿಕೆ ವಿರುದ್ಧ ಪ್ರತಿಭಟನೆ ನಡೆಸಿದೆ.

ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಿಂದ ಸೈಕಲ್‌ ಜಾಥಾ ಮುಂದುವರೆಸಿದ ಬಿಜೆಪಿಯನ್ನು ಕೇವಲ 500 ಮೀ. ಅಂತರದಲ್ಲಿಯೇ ಪೊಲೀಸರು ಅವರನ್ನು ಬಂಧಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಅಶ್ವಥ್‌ ನಾರಾಯಣ್‌, ಸಿಟಿ ರವಿ, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಬಿಜೆಪಿ ನಾಯಕರನ್ನು ಬಂಧಿಸಿ ಸಿಆರ್‌ ಮೈದಾನಕ್ಕೆ ಕರೆದೊಯ್ದಿದಾರೆ.

ಇತ್ತೀಚೆಗೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಪೆಟ್ರೋಲ್‌ಗೆ 3 ರೂ. ಹಾಗೂ ಡೀಸೆಲ್‌ಗೆ 3.50 ರೂ.ಗಳನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿತ್ತು.

Tags:
error: Content is protected !!