Mysore
27
broken clouds

Social Media

ಭಾನುವಾರ, 17 ಮೇ 2026
Light
Dark

ಮೈಸೂರಿಗೆ ಯೆಲ್ಲೋ ಅಲರ್ಟ್;‌ ರಾಜ್ಯದ ಈ ಜಿಲ್ಲೆಗಳಲ್ಲಿ ವರುಣನ ಅಬ್ಬರ ಜೋರು

ಮೈಸೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಒಳನಾಡಿನ ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ(ಜೂ.23) ವರುಣನ ಅಬ್ಬರ ಜೋರಾಗಲಿದೆ ಎಂದು ಹವಮಾನ ಇಲಾಖೆ ಹೇಳಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ.

ಮೈಸೂರು, ಬೆಳಗಾವಿ, ಬೀದರ್‌ ಹಾಗೂ ಕಲಬುರಗಿಗೆ ಯೆಲ್ಲೋ ಅಲರ್ಟ್‌ ಘೋಷಿಸಿದ್ದು, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಚಿಕ್ಕಬಳ್ಳಾಪುರದಲ್ಲಿ ಜೋರು ಮಳೆ ಸುರಿಯಲಿದ್ದು, ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ಉಳಿದಂತೆ ಚಾಮರಾಜನಗರ, ಮಂಡ್ಯ, ಹಾಸನ, ರಾಮನಗರ, ಕೋಲಾರ, ತುಮಕೂರು, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಹೇಳಿದೆ.

 

Tags:
error: Content is protected !!