Mysore
30
scattered clouds

Social Media

ಶನಿವಾರ, 28 ಫೆಬ್ರವರಿ 2026
Light
Dark

ತಮಿಳುನಾಡು: ಸಿಎಂ ಸ್ಟಾಲಿನ್‌ ವಿರುದ್ಧ ತಳಪತಿ ವಿಜಯ್‌ ವಾಗ್ದಾಳಿ

ಚೆನ್ನೈ: ರಾಜಕೀಯಕ್ಕೆ ಬರುವ ಹಾದಿಯಲ್ಲಿ ನಿಂತಿರುವ ತಮಿಳು ನಟ ತಳಪತಿ ವಿಜಯ್‌ ಇದೇ ಮೊದಲ ಬಾರಿಗೆ ತಮಿಳುನಾಡಿನ ಆಢಳಿತರೂಢ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿಸ್‌ ಸರ್ಕಾರ ರಾಜ್ಯದಲ್ಲಿ ಡ್ರಗ್ಸ್‌ ಮಾಫಿಯಾ ಹತ್ತಿಕ್ಕುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ನಟ ವಿಜಯ್‌ ಆಕ್ರೋಶ ಹೊರಹಾಕಿದ್ದಾರೆ.

ತಮಿಳುನಾಡು ರಾಜ್ಯದಲ್ಲಿ ಮಾದಕ ವಸ್ತುಗಳನ್ನು ಎಗ್ಗಿಲ್ಲದೆ ಹಂಚಲಾಗುತ್ತಿದೆ. ಯುವಕರನ್ನು ಮಾದಕ ವಸ್ತುಗಳ ವ್ಯಸನದಿಂದ ರಕ್ಷಣೆ ಮಾಡುವುದು ಸರ್ಕಾರದ ಕರ್ತವ್ಯ. ಆದರೆ, ಡಿಎಂಕೆ ಸರ್ಕಾರ ಈ ವಿಚಾರದಲ್ಲಿ ಸಂಪೂರ್ಣವಾಗಿ ಸೋಲು ಕಂಡಿದೆ. ಇದು ರಾಜ್ಯದ ಮಟ್ಟಿಗೆ ಒಳ್ಳೆಯ ಬೆಳವಣಿಗೆಯಲ್ಲ. ಹೀಗಾಗಿ ರಾಜ್ಯಕ್ಕೆ ಉತ್ತಮ ನಾಯಕರ ಅಗತ್ಯತೆ ಇದೆ ಎಂದು ವಿಜಯ್‌ ಅಭಿಪ್ರಾಯಪಟ್ಟಿದ್ದಾರೆ.

2026 ರಲ್ಲಿ ನಡೆಯುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ವಿಜಯ್‌ ಅವರ ಪಕ್ಷ ಸ್ಪರ್ಧೆಗೆ ಇಳಿಯುವ ಸಾಧ್ಯತೆ ಇದೆ. ರಾಜಕೀಯದಲ್ಲಿ ಸಕ್ರಿಯವಾಗಿ ಭಾಗವಹಿಸಲು ಇತ್ತೀಚೆಗಷ್ಟೇ ನಟ ವಿಜಯ್‌ ತೀರ್ಮಾನಿಸಿದ್ದು, ಇದೀಗ ತಮ್ಮ ರಾಜಕೀಯ ಹೋರಾಟದ ಮೊದಲ ಹೆಚ್ಚೆ ಇಟ್ಟಿದ್ದು, ಆಡಳಿತಾರೂಢ ಡಿಎಂಕೆ ಪಕ್ಷಕ್ಕೆ ಡ್ರಗ್ಸ್‌ ಚಾಟಿ ಬೀಸಿದ್ದಾರೆ.

Tags:
error: Content is protected !!