Mysore
27
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ಜು.8ರಂದು ಸಂಸದರಿಗೆ ದೆಹಲಿ ರೈತ ಚಳುವಳಿಯ ಜ್ಞಾಪನ ಪತ್ರ ಖಾಸಗಿ ಬಿಲ್‌ ಮಂಡಿಸುವಂತೆ ಒತ್ತಾಯ

ಮೈಸೂರು: ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು, ರೈತರ ಸಂಪೂರ್ಣ ಸಾಲಮನ್ನಾ ವಿಚಾರದಲ್ಲಿ ನಡೆಯುತ್ತಿರುವ ದೆಹಲಿ ಹೋರಾಟ ತೀವ್ರಗೊಳಿಸಲು ಸಂಸದರಿಗೆ ಜ್ಞಾಪನ ಪತ್ರ ಸಲ್ಲಿಕೆ ಮಾಡಿ ಮುಂಬರುವ ಲೋಕಸಭಾ ಅಧಿವೇಶನದಲ್ಲಿ ಖಾಸಗಿ ಬಿಲ್‌ ಮಂಡಿಸುವಂತೆ ಒತ್ತಾಯಿಸಲಾಗುವುದು ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್‌ ತಿಳಿಸಿದ್ದಾರೆ.

ದೆಹಲಿ ಸುತ್ತಮುತ್ತಲ ರಾಜ್ಯಗಳಲ್ಲಿ ಶಾಂತಿಯುತ ಹೋರಾಟ ನಡೆಸುತ್ತಿದ್ದ ರೈತರ ಮೇಲೆ ರಾಕೆಟ್‌ ಬಾಂಬ್‌ ಹಾಗೂ ಸೆಲ್‌ಗಳನ್ನು ಸಿಡಿಸುವ ಅಸ್ತ್ರ ಬಳಸಲಾಗಿದೆ. ಆದರೂ ನಮ್ಮ ರೈತರ ಚಳುವಳಿ ನಿಲ್ಲಲಿಲ್ಲ. ರೈತ ಚಳುವಳಿಗಳನ್ನು ಲಘುವಾಗಿ ಕಾಣುವವರಿಗೆ ತಕ್ಕ ಪಾಠ ಕಲಿಸುತ್ತೇವೆ. ರೈತರು ವ್ಯವಸಾಯ ನಿಲ್ಲಿಸಿದರೆ ದೇಶದಲ್ಲಿ ಹಸಿವಿಗಾಗಿ ಕ್ರಾಂತಿ ಶುರುವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕೇಂದ್ರ ಸರ್ಕಾರ 14 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ಮಾಡಿದ ತಕ್ಷಣ ರೈತರಿಗೆ ಯಾವುದೇ ಲಾಭವಿಲ್ಲ. ರೈತರು ಕೇಳುತ್ತಿರುವ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಬಗ್ಗೆ ಚಿಂತನೆ ನಡೆಸಬೇಕು ಎಂದು ಆಗ್ರಹಿಸಿದರು.

ನಮ್ಮ ರಾಜ್ಯದಲ್ಲಿ ತೀವ್ರ ಬರಗಾಲವಿದ್ದು, ರೈತರಿಗೆ ನೀಡುತ್ತಿದ್ದ 4 ಸಾವಿರ ಕಿಸಾನ್‌ ಸಮ್ಮಾನ್‌ ಹಣವನ್ನು ನಿಲ್ಲಿಸಲಾಗಿದೆ. ಹಾಲು ಉತ್ಪಾದಕ ರೈತರಿಗೆ ನೀಡುತ್ತಿದ್ದ ಪ್ರೋತ್ಸಾಹಧನವನ್ನು ಇನ್ನೂ ಕೊಟ್ಟಿಲ್ಲ ಎಂದು ಕಿಡಿಕಾರಿದರು.

ಇನ್ನೂ ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಲೆ ನೀಡದೇ ವಂಚನೆ ಮಾಡುತ್ತಿರುವ ಬಣ್ಣಾರಿ ಸಕ್ಕರೆ ಕಾರ್ಖಾನೆ ಮುಂದೆ ಇದೇ.18ರಂದು ಕಬ್ಬು ಬೆಳೆಗಾರರ ರೈತರ ಜಾಗೃತ ಸಮಾವೇಶ ನಡೆಸಿ ರೈತರನ್ನು ಜಾಗೃತಿ ಮೂಡಿಸಲಾಗುವುದು. ರೈತರ ಬಾಕಿ ಟನ್‌ಗೆ 150 ರೂ ಕೊಟ್ಟು ಕಾರ್ಖಾನೆ ಆರಂಭಿಸಿ ಎಂದು ಎಚ್ಚರಿಕೆ ನೀಡಲಾಗುವುದು ಎಂದು ಮಾಹಿತಿ ನೀಡಿದರು.

Tags:
error: Content is protected !!