Mysore
26
light rain

Social Media

ಶುಕ್ರವಾರ, 07 ಆಗಸ್ಟ್ 2026
Light
Dark

ಕೆ.ಆರ್‌ ನಗರ: ಡಯಾಲಿಸಿಸ್‌ ಕೇಂದ್ರ ಉದ್ಘಾಟನೆ

ಕೆ.ಆರ್.ನಗರ/ಮೈಸೂರು: ಕೆ.ಆರ್ ನಗರ ಪಟ್ಟಣದ ತಾಲೂಕು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ನೂತನ ಡಯಾಲಿಸಿಸ್ ಕೇಂದ್ರವನ್ನು ಶಾಸಕ ಡಿ.ರವಿಕುಮಾರ್‌ ಮಂಗಳವಾರ ಉದ್ಘಾಟಿಸಿದರು.

ನಂತರ ಮಾತಮಾಡಿದ ಅವರು, ತಾಲೂಕಿನಲ್ಲಿ ಮೂತ್ರಕೋಶದ ತೊಂದರೆಯಿಂದ ಬಳಲುತ್ತಿರುವ ಬಡ ರೋಗಿಗಳಿಗೆ ಈ ಕೇಂದ್ರ ಹೆಚ್ಚು ಅನುಕೂಲವಾಗಿದೆ. ಬಡವರಿಗೆ ಡಯಾಲಿಸಿಸ್ ಮಾಡಿಸಿಕೊಳ್ಳುವುದು ದೊಡ್ಡ ಹೊರೆ. ವಾರಕ್ಕೆ ಮೂರು ಬಾರಿ ಮಾಡಿಸಿಕೊಳ್ಳಬೇಕಾಗುತ್ತದೆ. ಒಮ್ಮೆ ಮಾಡಿಸಿದರೆ 2,000 ರೂ.ಗಳಿಗಿಂತ ಹೆಚ್ಚಿದೆ. ಬಡವರಿಗೆ ಇಷ್ಟು ಮೊತ್ತ ನೀಡಿ ಡಯಾಲಿಸಿಸ್ ಮಾಡಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಆಗಾಗಿ ಈ ಕೇಂದ್ರ ಬಡವರಿಗೆ ಹೆಚ್ಚು ನೆರವಾಗಲಿದೆ ಎಂದರು.

ಕಿಡ್ನಿ ವೈಫಲ್ಯವಾದಾಗ ಡಯಾಲಿಸಿಸ್ ಒಂದೇ ಮಾರ್ಗ. ಅದಕ್ಕಾಗಿ ಸರ್ಕಾರ ಬಡವರಿಗೆ ಸಹಾಯ ಮಾಡಬೇಕೆಂಬ ಉದ್ದೇಶದಿಂದ ಡಯಾಲಿಸಿಸ್ ಸೇವೆಗಳನ್ನು ಉಚಿತವಾಗಿ ನೀಡುತ್ತಿದೆ. ಆಸ್ಪತ್ರೆಯನ್ನು ಶುಚಿಯಾಗಿಡುವ ಜತೆಗೆ ರೋಗಿಗಳಿಗೆ ಡಾಕ್ಟರ್‌ಗಳು ಸ್ಪಂದಿಸಿ ಚಿಕಿತ್ಸೆ ನೀಡಬೇಕು ಎಂದು ಹೇಳಿದರು.

Tags:
error: Content is protected !!