Mysore
25
broken clouds

Social Media

ಭಾನುವಾರ, 16 ಆಗಸ್ಟ್ 2026
Light
Dark

ಜೋರು ಮಳೆ: ರಾಜ್ಯದ ಈ ಭಾಗದ ಶಾಲೆಗಳಿಗೆ ರಜೆ..

ಉಡುಪಿ: ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿದೆ. ಕಳೆದೊಂದು ವಾರದಿಂದ ಹಲವೆಡೆ ನಿರಂತರವಾಗಿ ಜೋರು ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಂಜಾಗೃತ ಕ್ರಮವಾಗಿ ಕೆಲವು ಭಾಗಗಳ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕರಾವಳಿ ಭಾಗದ ಭಾರೀ ಮಳೆ ಹಿನ್ನೆಲೆ ಬೈಂದೂರು ವಲಯದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಭೌಗೋಳಿಕವಾಗಿ ತಗ್ಗು ಪ್ರದೇಶದಲ್ಲಿ ನೀರು ನುಗ್ಗುವ ಅಪಾಯ ಇರುವುದರಿಂದ ರಜೆ ನೀಡಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ತಿಳಿಸಿದ್ದಾರೆ.

ಇತ್ತ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಎಲ್ಲಾ ಶಾಲೆಗಳಿಗೂ ರಜೆ ಘೋಷಿಸಲಾಗಿದೆ. ಜೊತೆಗೆ ಉತ್ತರ ಕನ್ನಡ ಜಿಲ್ಲೆಯ ಕುಮುಟಾ ತಾಲೂಕಿನ ಶಾಲೆಗಳಿಗೂ ರಜೆ ಘೋಷಿಸಲಾಗಿದೆ. ಮಳೆಯಿಂದ ಅವಾಂತರವಾಗುವ ಸಾಧ್ಯತೆಯಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ರಜೆ ಘೋಷಿಸಲಾಗಿದೆ.

Tags:
error: Content is protected !!