Mysore
29
clear sky

Social Media

ಶುಕ್ರವಾರ, 06 ಫೆಬ್ರವರಿ 2026
Light
Dark

ಕೆಆರ್‌ಎಸ್‌ ಜಲಾಶಯಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಭೇಟಿ

ಮಂಡ್ಯ: ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಇಂದು ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೆಆರ್‌ಎಸ್‌ನಲ್ಲಿ ನೀರಿನ ಮಟ್ಟ ಗರಿಷ್ಠ ಹಂತಕ್ಕೆ ತಲುಪಲು ಒಂದು ಅಡಿ ಬಾಕಿಯಿದ್ದು, ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಹೆಚ್ಚಾಗಿರುವುದರಿಂದ ಯಾವುದೇ ಕ್ಷಣದಲ್ಲಾದರೂ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಲಿದೆ.

ಜಲಾಶಯದ ಒಳಹರಿವು 60,016 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಹೊರಹರಿವು 52,020 ಕ್ಯೂಸೆಕ್ಸ್‌ಗಳಿಗೆ ಏರಿಕೆಯಾಗಿದೆ. 124.80 ಅಡಿ ಸಂಗ್ರಹ ಸಾಮರ್ಥ್ಯವಿರುವ ಜಲಾಶಯದಲ್ಲಿಂದು 123.20 ಅಡಿ ನೀರು ಸಂಗ್ರಹವಾಗಿದೆ.

ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ಕೆಆರ್‌ಎಸ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಶಾಸಕರಾದ ರಮೇಶ್‌ ಬಂಡಿಸಿದ್ದೇಗೌಡ, ದರ್ಶನ್‌ ಪುಟ್ಟಣ್ಣಯ್ಯ, ಕೆ.ಎಂ.ಉದಯ್‌, ದಿನೇಶ್‌ ಗೂಳಿಗೌಡ, ಜಿಲ್ಲಾಧಿಕಾರಿ ಡಾ.ಕುಮಾರ್‌, ಜಿಲ್ಲಾ ಪಂಚಾಯಿತಿ ಸಿಬಿಓ ಶೇಖರ್‌ ತನ್ವೀರ್‌ ಆಸಿಫ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಮತ್ತಿತರರು ಹಾಜರಿದ್ದರು.

 

 

Tags:
error: Content is protected !!