Mysore
24
overcast clouds

Social Media

ಮಂಗಳವಾರ, 05 ಮೇ 2026
Light
Dark

ಕೆಆರ್‌ಎಸ್‌ಗೆ ಸಿಎಂ ಬಾಗಿನ ಅರ್ಪಣೆ: ಬಿಗಿ ಭದ್ರತೆ

ಮಂಡ್ಯ: ಜಿಲ್ಲೆಯ ಜೀವನಾಡಿ ಕೆ.ಆರ್.ಎಸ್ ಗೆ ಇಂದು ಸಿಎಂ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಲಿದ್ದಾರೆ.

ಬೆಳಗ್ಗೆ 10.30ಕ್ಕೆ‌ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್. ಎಸ್ ಡ್ಯಾಂಗೆ ಬಾಗಿನ ಅರ್ಪಿಸಲಿದ್ದು ಇದಕ್ಕಾಗಿ ಸಕಲ ಸಿದ್ದತೆ ಆಗಿದೆ.

ಈಗಾಗಲೇ ಜಲಾಶಯ 124 ಅಡಿ ತುಂಬಿದ್ದು, ಈ ಹಿನ್ನಲೆಯಲ್ಲಿ ಡ್ಯಾಂ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಪ್ರತಿವರ್ಷ ಕಾವೇರಿ ತುಂಬುತ್ತಿದ್ದಂತೆ ರಾಜ್ಯದ ಮುಖ್ಯಮಂತ್ರಿಯಾದವರು ಬಂದು ಬಾಗಿನ ಅರ್ಪಿಸುವ ಸಂಪ್ರದಾಯದಂತೆ ಸಿಎಂ ಸಿದ್ದರಾಮಯ್ಯ ಇಂದು ಕಾವೇರಿ ನದಿಗೆ ಬಾಗಿನ ಅರ್ಪಿಸಲಿದ್ದಾರೆ. ಕೆ.ಆರ್.ಎಸ್ ಗೆ ಸಿಎಂ ಆಗಮಿಸುತ್ತಿರುವ ಹಿನ್ನೆಲೆ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

Tags:
error: Content is protected !!