Mysore
20
overcast clouds
Light
Dark

ಬಿಜೆಪಿ-ಜೆಡಿಎಸ್‌ ದಲಿತ ವಿರೋಧಿ: ಮೈತ್ರಿ ಪಕ್ಷಕ್ಕೆ ಸಿಎಂ ತಿರುಗೇಟು

ಮಂಡ್ಯ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೀಸಲು ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಬಿಜೆಪಿ-ಜೆಡಿಎಸ್‌ ಅವರು ಅಪಪ್ರಚಾರ ಮಾಡುತ್ತಿದ್ದಾರೆ. ದೇಶದ ಇತಿಹಾಸದಲ್ಲಿ ಇದೂವರೆಗೆ ದಲಿತರಿಗೆ ಕಾಂಗ್ರೆಸ್‌ ಪಕ್ಷ ಮಾಡಿದಷ್ಟು ಅನುಕೂಲವನ್ನು ಬಿಜೆಪಿ-ಜೆಡಿಎಸ್‌ ಪಕ್ಷಗಳು ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಮೈತ್ರಿಗೆ ಪಕ್ಷಕ್ಕೆ ತೀರುಗೇಟು ನೀಡಿದರು.

ಅವರು ಸೋಮವಾರ ಕೆಆರ್‌ಎಸ್‌ ಗೆ ಬಾಗಿನ ಅರ್ಪಿಸಿ, ಬಳಿಕ ಮಾತನಾಡಿದ ಅವರು, ಎಸ್‌ಸಿಪಿ-ಟಿಎಸ್‌ಪಿ ಜಾರಿ ಇರುವುದು ಕರ್ನಾಟಕದಲ್ಲಿ ಮಾತ್ರ. ಬಿಜೆಪಿ ಅಧಿಕಾರದಲ್ಲಿರುವ ಯಾವ ರಾಜ್ಯದಲ್ಲಾದರೂ ಈ ಯೋಜನೆ ಜಾರಿ ಇದೆಯೇ? ಎಂದು ಪ್ರಶ್ನಿಸಿದರು.

ವಿರೋಧ ಪಕ್ಷಗಳು ಗಾಂಧಿ, ಅಂಬೇಡ್ಕರ್‌, ಬಸವಣ್ಣ ಅವರ ಸಿದ್ದಾಂತಕ್ಕೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದೆ. ಜತೆಗೆ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದರು.