Mysore
20
overcast clouds

Social Media

ಶನಿವಾರ, 29 ಆಗಸ್ಟ್ 2026
Light
Dark

ಬೆಂಗಳೂರಿಗೆ ಕುಡಿಯುವ ನೀರು ಕೊಡಿ: ರಾಜ್ಯಸಭೆಯಲ್ಲಿ ಎಚ್.ಡಿ.ದೇವೇಗೌಡ ಮನವಿ

ನವದೆಹಲಿ: ಕುಡಿಯುವ ನೀರಿಗಾಗಿ ಜನ ಎನ್‌ಡಿಎಗೆ ಮತ ನೀಡಿದ್ದಾರೆ. ಹಾಗಾಗಿ ಬೆಂಗಳೂರಿಗೆ ಕುಡಿಯುವ ನೀರು ಕೊಡಿ ಎಂದು ಎಚ್.ಡಿ.ದೇವೇಗೌಡ ರಾಜ್ಯಸಭೆಯಲ್ಲಿ ಮನವಿ ಮಾಡಿದ್ದಾರೆ.

ಈ ಬಗ್ಗೆ ರಾಜ್ಯಸಭೆಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು, ಹಳೇ ಮೈಸೂರು ಭಾಗ ಮತ್ತು ಬೆಂಗಳೂರಿಗೆ ಕಾವೇರಿ ನೀರೇ ಆಧಾರ. ಕುಡಿಯುವ ನೀರು ಕೊಡುವ ಭರವಸೆಯ ಮೇಲೆ ಜನರು ಎನ್‌ಡಿಎಗೆ ಮತ ಹಾಕಿದ್ದಾರೆ. ಆದ್ದರಿಂದ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ ಎಂದು ಮನವಿ ಮಾಡಿದ್ದಾರೆ.

ಬೆಂಗಳೂರು ದಿನದಿಂದ ದಿನಕ್ಕೆ ಬೆಳೆಯುತ್ತಿರುವ ನಗರ. ಬೆಂಗಳೂರಿಗೆ ಕುಡಿಯುವ ನೀರಿನ ಅಗತ್ಯವಿದೆ. ಕುಡಿಯಲು ನೀರಿಲ್ಲದೇ ಜನರು ಕಂಗಾಲಾಗಿದ್ದಾರೆ. ಈ ಬಾರಿ ಮಳೆ ಚೆನ್ನಾಗಿ ಆಗಿರುವ ಪರಿಣಾಮ ಜಲಾಶಯಗಳು ತುಂಬಿ ತುಳುಕುತ್ತಿವೆ. ಆದ್ದರಿಂದ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಬಗೆಹರಿಸಿ ಎಂದು ಮನವಿ ಮಾಡಿದರು.

ಬಳಿಕ ಬಜೆಟ್‌ ಬಗ್ಗೆ ಮಾತನಾಡಿದ ಅವರು, ನಾನು ಹೃದಯಪೂರ್ವಕವಾಗಿ ಬಜೆಟ್‌ ಬೆಂಬಲಿಸುತ್ತೇನೆ. ನಾನು ಈ ಹಿಂದೆ ಮೋದಿಯವರನ್ನು ವಿರೋಧಿಸಿದ್ದೆ. ಆದರೆ ಈಗ ನಾನು ಎನ್‌ಡಿಎ ಭಾಗವಾಗಿದ್ದೇನೆ ಎಂದು ಜೆ.ಪಿ.ನಡ್ಡಾಗೆ ಧನ್ಯವಾದ ತಿಳಿಸಿದರು.

ಬಳಿಕ ಕೃಷಿ ಬಗ್ಗೆ ಮಾತನಾಡುತ್ತಾ ಪ್ರಧಾನಿ ನರೇಂದ್ರ ಮೋದಿಯನ್ನು ಹಾಡಿ ಹೊಗಳಿದರು. ಮೋದಿ ಗುಜರಾತ್‌ನಲ್ಲಿ ತಂದ ಸುಧಾರಣೆಗಳ ಬಗ್ಗೆ ವಿವರಿಸಿ ಶ್ಲಾಘಿಸಿದರು.

Tags:
error: Content is protected !!