Mysore
23
overcast clouds

Social Media

ಶನಿವಾರ, 23 ಮೇ 2026
Light
Dark

ಸಿಎಂಗೆ ಶೋಕಾಸ್ ನೋಟಿಸ್‌ ರಾಜಕೀಯ ಪ್ರೇರಿತ: ಎನ್‌ ಚಲುವರಾಯಸ್ವಾಮಿ

ಮಂಡ್ಯ: ಈ ಹಿಂದೆ ಮುರುಗೇಶ್ ನಿರಾಣಿ ಹಾಗು ಶಶಿಕಲ‌ ಜೊಲ್ಲೆ ವಿರುದ್ದವೂ ಪ್ರಸಿಕ್ಯೂಸನ್ ಅನುಮತಿ ಕೇಳಲಾಗಿತ್ತು. ಆದರೆ, ಅವರಿಗೆ ಇಲ್ಲದೆ ಇರೋ ನೋಟಿಸ್‌ ಸಿಎಂ ಸಿದ್ದರಾಮಯ್ಯಗೆ ಕೊಡ್ತಿರೋದು ಯಾಕೆ ಎಂದು ಕೃಷಿ ಸಚಿವ ಎನ್‌ ಚಲುವರಾಯಸ್ವಾಮಿ ಪ್ರಶ್ನಿಸಿದ್ದಾರೆ.

ರಾಜ್ಯದಲ್ಲಿ ರಾಜಕೀಯ ಬೆಳವಣಿಗೆ ವಿಚಾರವಾಗಿ ಶುಕ್ರವಾರ(ಆ.2) ನಾಗಮಂಗಲದಲ್ಲಿ ಮಾತನಾಡಿದ ಸಚಿವ ಚೆಲುವರಾಯಸ್ವಾಮಿ, ಸಿ ಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯುಸನ್ ಗೆ ಅನುಮತಿ ನೀಡಿದ್ರೂ ಸರ್ಕಾರಕ್ಕೆ ಯಾಕೆ ತೊಂದರೆ ಆಗುತ್ತೆ. ಅವರದೆಲ್ಲಾ ರಾಜಕೀಯ ಪ್ರೇರಿತ ಎಂದು ವಾಗ್ದಾಳಿ ನಡೆಸಿದರು.

ಮೂಡ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಇಲ್ಲ. ಕಾನೂನು ಬದ್ದವಾಗಿಯೇ ಅವರು ನಿವೇಶನ ಪಡೆದುಕೊಂಡಿದ್ದಾರೆ. ಇದೆಲ್ಲಾ ನಡೆದಿರೋದು ಬಿಜೆಪಿ ಅವದಿಯಲ್ಲಿ
ಹಾಗಾಗಿ ಬಿಜೆಪಿಯ ಮೇಲೆ ಕ್ರಮ‌ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಪಾದಯಾತ್ರೆ ವಿಚಾರವಾಗಿ ಮಾತನಾಡಿದ ಸಚಿವರು, ಬಿಜೆಪಿ ಅವಧಿಯಲ್ಲಿನ ಹಗರಣಗಳ ಬಗ್ಗೆ ನಾವು ಪ್ರಶ್ನೆ ಮಾಡ್ತಿವಿ ಎಂದರು.

ಇನ್ನೂ ಪಾದಯಾತ್ರೆಗೆ ಜೆಡಿಎಸ್ ಬೆಂಬಲ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಿಜೆಪಿ ಜೊತೆ ಇದ್ದಾಗ ಬೆಂಬಲ ಕೊಡಬೇಕಲ್ವಾ? ಆಗಾಗಿ ಕೊಡ್ತಿದ್ದಾರೆ. ಬೆಂಬಲ ಕೊಡದಿದ್ದರೆ ಪಕ್ಷದಿಂದ ತೆಗಿತಾರೆ ಎಂಬ ಕಾರಣಕ್ಕೆ‌ ಜೆಡಿಎಸ್ ನವರು ಬೆಂಬಲ ಕೊಟ್ಟಿದ್ದಾರೆ ಎಂದರು

Tags:
error: Content is protected !!