Mysore
23
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಮುರಿದಿರುವ ಮಾಹಿತಿ ಪಡೆದ ಸಿಎಂ

ಬೆಂಗಳೂರು: ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಕಟ್ ಘಟನೆ ಕುರಿತಂತೆ ಜಲ ಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಮುಖ್ಯಮಂತ್ರಿಗಳು ಇಂದು ಬೆಳಗ್ಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತ ಅವರೊಂದಿಗೆ ಮಾತುಕತೆ ನಡೆಸಿ ಸಂಪೂರ್ಣ ವಿವರ ಪಡೆದರು. ಯಾವುದೇ ಹಾನಿ ಸಂಭವಿಸದಂತೆ ಮುಂಜಾಗ್ರತೆ ವಹಿಸುವಂತೆ ಸೂಚಿಸಿದರು.

ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರೊಂದಿಗೂ ಸಿಎಂ ಚರ್ಚಿಸಿದರು.

ತುಂಗಭದ್ರಾ ಅಣೆಕಟ್ಟೆಯ 19ನೇ ಕ್ರಸ್ಟ್ ಗೇಟ್ ಮುರಿದು ಹೋಗಿರುವುದರಿಂದ ನೀರು ಖಾಲಿ ಮಾಡುವ ಸಲುವಾಗಿ ಎಲ್ಲಾ 33 ಗೇಟ್‌ಗಳನ್ನು ತೆರೆದು ಸುಮಾರು 1 ಲಕ್ಷ ಕ್ಯುಸೆಕ್ ನಷ್ಟು ನೀರನ್ನು ನದಿಗೆ ಬಿಡಲಾಗುತ್ತಿದೆ. ತುಂಗಭದ್ರಾ ಅಣೆಕಟ್ಟೆಯಿಂದ ಭಾರಿ ಪ್ರಮಾಣದಲ್ಲಿ ನೀರನ್ನು ನದಿಗೆ ಬಿಡುತ್ತಿದೆ. ಪ್ರವಾಸಿಗರಿಗೆ ಅಣೆಕಟ್ಟೆ ವೀಕ್ಷಣೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ.

Tags:
error: Content is protected !!