Mysore
36
scattered clouds

Social Media

ಶನಿವಾರ, 02 ಮೇ 2026
Light
Dark

ಆರೋಪಗಳಿಗೆ ದಾಖಲೆಗಳನ್ನು ಒದಗಿಸಿ

ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ‘ಜನಾಂದೋಲನ’ ಸಮಾವೇಶದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ‘ಮಿಸ್ಟರ್ ಕುಮಾರಸ್ವಾಮಿ, ನಿನ್ನ ಮಗನನ್ನು ರಾಜಕೀಯ ವಾಗಿ ಬೆಳೆಸುವ ಸಲುವಾಗಿ ನಿನ್ನ ಸಹೋದರ ರೇವಣ್ಣ ಅವರ ಮಕ್ಕಳನ್ನೇ ಜೈಲಿಗೆ ಕಳುಹಿಸಿದ್ದು ಯಾರು?’ ಎಂದು ಏಕವಚನದಲ್ಲಿ ಪ್ರಶ್ನಿಸಿದ್ದಾರೆ.

ಇದಕ್ಕೆ ಪ್ರತಿಯಾಗಿ, ಮಾರನೇ ದಿನ ನಡೆದ ಮೈಸೂರು ಚಲೋ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ‘ರಾಜ್ಯದ ಹೆಸರಾಂತ ಉದ್ಯಮಿ ಕಾಫಿ ಡೇ ಮಾಲೀಕರಾದ, ಸಿದ್ದಾರ್ಥರವರ ಸಾವಿಗೆ ಕಾರಣ ಯಾರು ಶಿವಕುಮಾರ್ ಅವರೇ’ ಎಂದು ಪ್ರಶ್ನಿಸಿದ್ದಾರೆ.

ಈ ಇಬ್ಬರೂ ನಾಯಕರೂ ತಮ್ಮ ವೈಯಕ್ತಿಕ ದ್ವೇಷವನ್ನು ತೀರಿಸಿಕೊಳ್ಳುವ ಸಲುವಾಗಿ ಸಾರ್ವಜನಿಕ ವೇದಿಕೆಗಳ ಮೇಲೆ ಈ ಆರೋಪ-ಪ್ರತ್ಯಾರೋಪಗಳನ್ನು ಮಾಡಿಕೊಳ್ಳುವುದು ಸರಿಯೇ? ಜವಾ ಬ್ದಾರಿಯುತ ಸ್ಥಾನದಲ್ಲಿರುವ ಈ ಇಬ್ಬರೂ ನಾಯಕರಿಗೆ ಸಾರ್ವಜನಿಕರ ಎದುರು ಹೇಗೆ ಮಾತನಾಡಬೇಕು ಎಂಬುದು ತಿಳಿದಿಲ್ಲವೇ? ಈ ರೀತಿಯ ಗಂಭೀರ ಆರೋಪಗಳನ್ನು ಮಾಡುವವರು ಆರೋಪಗಳನ್ನು ಸಾಬೀತು ಮಾಡಲು ಸಾಕ್ಷಾಧಾರಗಳನ್ನು ಒದಗಿಸ ಬೇಕಲ್ಲವೇ? ಅದನ್ನು ಏಕೆ ಮಾಡುವುದಿಲ್ಲ.

ಕೇವಲ ತಮ್ಮ ರಾಜಕೀಯ ಹಿತಕ್ಕಾಗಿ ಸುಳ್ಳು ಆರೋಪಗಳನ್ನು ಮಾಡಿಕೊಂಡು ಕಾಲಹರಣ ಮಾಡುವುದರಿಂದ ಯಾವುದೇ ಲಾಭವಿಲ್ಲ. ಮುಂದಿನ ದಿನಗಳಲ್ಲಿ ಈ ಆರೋಪಗಳು ಅವರವರಿಗೇ ತಿರುಗುಬಾಣವಾಗಬಹುದು.

ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು

Tags:
error: Content is protected !!