Mysore
29
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ಓದುಗರ ಪತ್ರ| “ಅರ್ಜುನ’ನ ಸ್ತಬ್ದಚಿತ್ರ ಪ್ರದರ್ಶಿಸಿ

ಸತತ 9 ಬಾರಿ ಮೈಸೂರು ದಸರಾ ಮಹೋತ್ಸವದಲ್ಲಿ ಚಿನ್ನದ ಅಂಬಾರಿ ಹೊತ್ತು ಸಾಗಿದ್ದ ಅರ್ಜುನ ಆನೆ ಕಳೆದ ವರ್ಷ ಸಕಲೇಶಪುರ ಸಮೀಪ ಕಾಡಾನೆ ಸೆರೆಹಿಡಿಯುವ ಕಾರ್ಯಾಚರಣೆಯ ವೇಳೆ ಸಾವನ್ನಪ್ಪಿತ್ತು.

2019ರಲ್ಲಿ ದಸರಾದಿಂದ ನಿವೃತ್ತಿ ಪಡೆದಿದ್ದ ಅರ್ಜುನ ಕಳೆದ ವರ್ಷದ ದಸರಾದಲ್ಲಿ ನಿಶಾನೆ ಆನೆಯಾಗಿ ಗಜಪಡೆಯನ್ನು ಮುನ್ನಡೆಸಿದ್ದ. ಈ ವರ್ಷವೂ ನಿಶಾನೆ ಆನೆಯಾಗಿ ಭಾಗಿಯಾಗುವ ನಿರೀಕ್ಷೆ ಇತ್ತು.

ಸರ್ಕಾರ ಸಕಲೇಶಪುರದ ಅರಣ್ಯ ಪ್ರದೇಶದಲ್ಲಿ ಅರ್ಜುನ ಆನೆಯ ಅಂತ್ಯಕ್ರಿಯೆಯನ್ನು ಮಾಡಿದ್ದು, ಸಮಾಧಿ ಸ್ಥಳದಲ್ಲಿ ಹಾಗೂ ಅರ್ಜುನನ ವಾಸಸ್ಥಳವಾಗಿದ್ದ ಎಚ್.ಡಿ.ಕೋಟೆಯ ಬಳ್ಳೆ ಆನೆ ಶಿಬಿರದಲ್ಲಿ ಸ್ಮಾರಕ ನಿರ್ಮಿಸುವುದಾಗಿ ತಿಳಿಸಿತ್ತು.

ಆದರೆ ಈವರೆಗೂ ಸ್ಮಾರಕ ನಿರ್ಮಾಣದ ಕಾಮಗಾರಿಯೇ ಪ್ರಾರಂಭವಾಗಿಲ್ಲ. ಅರ್ಜುನ ದಸರಾದಲ್ಲಿ ಅಂಬಾರಿ ಹೊತ್ತು ಗಾಂಭೀರ್ಯದಿಂದ ಹೆಜ್ಜೆ ಹಾಕಿ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದ. ಇಂತಹ ಆನೆಗೆ ಗೌರವ ಸೂಚಿಸಬೇಕಾದದ್ದು ಸರ್ಕಾರದ ಕರ್ತವ್ಯ. ಆದ್ದರಿಂದ ಈ ಬಾರಿಯ ದಸರಾ ಮಹೋತ್ಸವದಲ್ಲಿ ಅರ್ಜುನ ಆನೆಯ ಸ್ತಬ್ಧಚಿತ್ರ ಪ್ರದರ್ಶಿಸುವ ಮೂಲಕ ಆತನನ್ನು ಸ್ಮರಿಸಬೇಕು.

– ಅಖಿಲೇಶ್, ಅಂತರಸಂತೆ, ಎಚ್.ಡಿ.ಕೋಟೆ ತಾ.

Tags:
error: Content is protected !!