ಬೆಂಗಳೂರು: ತೀವ್ರ ಜ್ವರದಿಂದ ಬಳಲುತ್ತಿರುವ ಮಾಜಿ ಸಚಿವ ಹಾಗೂ ಬಿಜೆಪಿ ಹಾಲಿ ಶಾಸಕ ಎಸ್.ಸುರೇಶ್ ಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮಾಜಿ ಸಚಿವ ಸುರೇಶ್ ಕುಮಾರ್ ಅವರ ಮೆದುಳಿಗೆ ಜ್ವರ ತಗುಲಿರುವ ಬಗ್ಗೆ ಮಾಹಿತಿ ಕೇಳಿಬಂದಿದೆ. ಕಳೆದ ತಿಂಗಳು ಬೆಂಗಳೂರಿನಿಂದ ತಿರುಪತಿಗೆ ಸೈಕಲ್ ಪ್ರಯಾಣ ಬೆಳೆಸಿದ್ದ ಸುರೇಶ್ ಕುಮಾರ್ ಅವರು, ಮುಡಾ ಪಾದಯಾತ್ರೆಯಲ್ಲೂ ಭಾಗಿಯಾಗಿದ್ದರು.
ಕಳೆದ ಮೂರ್ನಾಲ್ಕು ದಿನಗಳಿಂದಲೂ ತೀವ್ರ ಜ್ವರದಿಂದ ಬಳಲುತ್ತಿದ್ದರು. ಕಳೆದ ರಾತ್ರಿ ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.