ಮೈಸೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ನಟ ದರ್ಶನ್ ಬಂಧನವಾಗಿ ಮೂರು ತಿಂಗಾಳಾಗಿದೆ. ಪೊಲೀಸರು ಕೂಡ ಇತ್ತೀಚೆಗಷ್ಟೆ ಪ್ರಕರಣದ ಪೂರ್ಣ ಆರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ.
ಆರೋಪ ಪಟ್ಟಿ ಸಲ್ಲಿಕೆ ನಂತರ ದರ್ಶನ್ ಜಾಮೀನಿಗೆ ಅರ್ಜಿ ಹಾಕುತ್ತಾರೆ ಎನ್ನಲಾಗಿತ್ತು. ಆದರೆ, ಅದು ಸುಳ್ಳಾಗಿದೆ. ಈ ಬಗ್ಗೆ ಇಂದು ದರ್ಶನ್ ನೋಡಲು ಬಳ್ಳಾರಿ ಜೈಲಿಗೆ ಬಂದಿದ್ದ ದರ್ಶನ್ ಪರ ವಕೀಲರು ಮಾಧ್ಯಮದವರೊಂದಿಗೆ ಮಾತನಾಡಿ, ಪ್ರಕರಣದ ವಿಚಾರವಾಗಿ ದರ್ಶನ್ ಅವರೊಂದಿಗೆ ಚರ್ಚಿಸಲಾಗಿದೆ. ನಾವು ಆರೋಪ ಪಟ್ಟಿ ಓದುತ್ತಿದ್ದೇವೆ. ದರ್ಶನ್ ಈಗಲೇ ಜಾಮೀನಿಗೆ ಅರ್ಜಿ ಸಲ್ಲಿಸುವುದಿಲ್ಲ ಎಂದಿದ್ದಾರೆ.