Mysore
23
scattered clouds

Social Media

ಬುಧವಾರ, 26 ಆಗಸ್ಟ್ 2026
Light
Dark

ಗುಣಮಟ್ಟದಿಂದ ಅಂಬೇಡ್ಕರ್‌ ಭವನದ ಕಾಮಗಾರಿ ಪೂರ್ಣಗೊಳಿಸುವಂತೆ ಶಾಸಕ ಎಂ.ಆರ್.ಮಂಜುನಾಥ್‌ ಸೂಚನೆ

ಹನೂರು: ಕ್ಷೇತ್ರ ವ್ಯಾಪ್ತಿಯ ಕಾಮಗೆರೆ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದ ಮುಂದುವರೆದ ಕಾಮಗಾರಿಯನ್ನು ಗುಣಮಟ್ಟದಿಂದ ಪೂರ್ಣಗೊಳಿಸುವಂತೆ ಶಾಸಕ ಎಂ.ಆರ್ ಮಂಜುನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ವೇಳೆ ಮಾತನಾಡಿದ ಅವರು, ಹನೂರು ಕ್ಷೇತ್ರ ವ್ಯಾಪ್ತಿಯ ಕಾಮಗೆರೆ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನವನ್ನು ಹಲವು ವರ್ಷಗಳ ಹಿಂದೆಯೇ ನಿರ್ಮಾಣ ಮಾಡಲಾಗಿದೆ.

ಆದರೆ ಮದುವೆ ಹಾಗೂ ಇನ್ನಿತರ ಶುಭ ಕಾರ್ಯಕ್ರಮಗಳನ್ನು ಮಾಡಲು ಅಡುಗೆ ಮನೆ ಇಲ್ಲದೆ ಇರುವುದರಿಂದ ತೊಂದರೆಯಾಗಿತ್ತು. ಈ ನಿಟ್ಟಿನಲ್ಲಿ ಗ್ರಾಮಸ್ಥರು ಅಡುಗೆ ಮನೆ ನಿರ್ಮಾಣಕ್ಕೆ ಅನುದಾನ ನೀಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ 12 ಲಕ್ಷ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾಗುತ್ತಿದೆ ಎಂದರು.

ಇನ್ನು ಅಂಬೇಡ್ಕರ್ ಸಮುದಾಯ ಭವನಕ್ಕೆ ಮುಂದಿನ ದಿನಗಳಲ್ಲಿ ಇನ್ನಷ್ಟು ಅನುದಾನ ನೀಡಿ ಅಭಿವೃದ್ಧಿಪಡಿಸಲಾಗುವುದು. ಗ್ರಾಮಸ್ಥರು ಕಾಮಗಾರಿ ನಡೆಯುವ ವೇಳೆ ಸ್ಥಳದಲ್ಲಿದ್ದು ಗುಣಮಟ್ಟದ ಕಾಮಗಾರಿ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದರು.

ಇದೇ ವೇಳೆ ನಿರ್ಮಿತಿ ಕೇಂದ್ರದ ಜೆಇ ರವಿಕುಮಾರ್, ಮುಖಂಡರಾದ ಚಿನ್ನಸ್ವಾಮಿ, ಜೆಸ್ಸಿಂಮ್ ಪಾಷಾ, ಡಿ.ಕೆ ರಾಜು, ಶಿವು, ಚನ್ನಾ ಲಿಂಗನಹಳ್ಳಿ ವೆಂಕಟೇಶ್ ಸೇರಿದಂತೆ ಹಲವರು ಹಾಜರಿದ್ದರು.

Tags:
error: Content is protected !!