ಮೈಸೂರು: ಎನ್.ಆರ್.ಮೊಹಲ್ಲಾ ನಿವಾಸಿ ಕೆ.ಎನ್.ನಾಗರಾಜನ್ ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ.
ನಾಗರಾಜನ್ ಅವರ ನಿಧನದಿಂದ ಕುಟುಂಬಸ್ಥರು ಶೋಕ ಸಾಗರದಲ್ಲಿ ಮುಳುಗಿದ್ದಾರೆ.
ಮೃತ ನಾಗರಾಜನ್ ಅವರು, ಪತ್ನಿ, ನಾಲ್ವರು ಪುತ್ರರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ನಾಗರಾಜನ್ ಅವರ ಅಂತ್ಯಕ್ರಿಯೆಯನ್ನು ನಾಳೆ ಮಧ್ಯಾಹ್ನ 12.30ಕ್ಕೆ ಬನ್ನಿಮಂಟಪದಲ್ಲಿರುವ ವೀರಶೈವ ರುದ್ರ ಭೂಮಿಯಲ್ಲಿ ನಡೆಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.