Mysore
24
haze

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

ʼಒಂದು ರಾಷ್ಟ್ರ ಒಂದು ಚುನಾವಣೆಗೆʼ ಕೇಂದ್ರ ಸಚಿವ ಸಂಪುಟ ಅಸ್ತು

ನವದೆಹಲಿ: ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಸಮ್ಮತಿಸಿದೆ. ಕೇಂದ್ರವು ಚಳಿಗಾಲದ ಅಧಿವೇಶದಲ್ಲಿ ಈ ಬಗ್ಗೆ ಮಸೂದೆಯನ್ನು ತರಲಿದೆ ಎಂದು ವರದಿಯಾಗಿದೆ.

ಲೋಕಸಭಾ ಚುನಾವಣೆ ಘೋಷಣೆಗೂ ಮುನ್ನ ಮಾಜಿ ರಾಷ್ಟ್ರಪತಿ ಕೋವಿಂದ್‌ ನೇತೃತ್ವದ ಸಮಿತಿ ಮಾರ್ಚ್‌ನಲ್ಲಿ ವರದಿ ಸಲ್ಲಿಸಿತ್ತು. ವರದಿಯನ್ನು ಸಂಪುಟದ ಮುಂದೆ ಪ್ರಸ್ತಾಪಿಸಲಾಗಿದ್ದು, ಸಂಪುಟವು ಅಸ್ತು ಎಂದಿದೆ.

ಸಮಿತಿಯು ಮೊದಲ ಹಂತವಾಗಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆಗಳನ್ನು ಶಿಫಾರಸು ಮಾಡಿದೆ. ಹಾಗೆಯೇ ಇದಾದ ನೂರು ದಿನಗಳಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲೂ ಸಮಿತಿ ಹೇಳಿದೆ.

ಸಮಿತಿಯು ಮಾಡಿದ ಶಿಫಾರಸ್ಸುಗಳ ಅನುಷ್ಠಾನವನ್ನು ಪರಿಶೀಲಿಸಲು ಅನುಷ್ಠಾನ ಗುಂಪು ಸ್ಥಾಪಿಸಲು ಸಮಿತಿಯು ಪ್ರಸ್ತಾಪಿಸಿದೆ.

Tags:
error: Content is protected !!