Mysore
21
overcast clouds

Social Media

ಶನಿವಾರ, 19 ಅಕ್ಟೋಬರ್ 2024
Light
Dark

ಕಳಸಾ-ಬಂಡೂರಿ ಯೋಜನೆಗೆ ಅನುಮೋದನೆ ನೀಡುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಳಸಾ-ಬಂಡೂರಿ ಯೋಜನೆಗೆ ಶೀಘ್ರದಲ್ಲೇ ಅನುಮತಿ ನೀಡುವಂತೆ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಉತ್ತರ ಕರ್ನಾಟಕ ಭಾಗದ ಜನರ ಜೀವನಾಡಿಯಾಗಿರುವ ಕಳಸಾ-ಬಂಡೂರಿ ನಾಲಾ ಕುಡಿಯುವ ನೀರಿನ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಅನುಮೋದನೆ ಒದಗಿಸಬೇಕು.

ಈ ಬಗ್ಗೆ ಆಗ್ರಹಿಸಿ ಸಿಎಂ ಸಿದ್ದರಾಮಯ್ಯ ಅವರು, ಮಂಡಳಿಯ ಅಧ್ಯಕ್ಷರಾಗಿರುವ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಮೊದಲಿಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಶುಭಾಶಯ ತಿಳಿಸಿದ ಸಿಎಂ ಸಿದ್ದರಾಮಯ್ಯ, ಯೋಜನೆಯ ಬಗ್ಗೆ ಸವಿವರವಾಗಿ ಬರೆದಿದ್ದಾರೆ.

ನೀವು ಅಧ್ಯಕ್ಷರಾಗಿರುವ ವನ್ಯಜೀವಿ ರಾಷ್ಟ್ರೀಯ ಮಂಡಳಿಯು ಯೋಜನೆಗೆ ಅಗತ್ಯ ಅನುಮತಿಯನ್ನು ನೀಡಿಲ್ಲ. ಗೋವಾದ ಮುಖ್ಯ ವನ್ಯಜೀವಿ ವಾರ್ಡನ್‌ ಕಳಸಾ ಬಂಡೂರಿನಲ್ಲಿ ಕರ್ನಾಟಕ ಯಾವುದೇ ಚಟುವಟಿಕೆಗಳನ್ನು ಕೈಗೊಳ್ಳದಂತೆ ಕಾನೂನು ಬಾಹಿರ ಆದೇಶ ಹೊರಡಿಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಆದ್ದರಿಂದ ಆದಷ್ಟು ಬೇಗ ಈ ಯೋಜನೆಗೆ ಅನುಮತಿ ನೀಡಿ ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.

 

Tags: