Mysore
26
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

ದಸರಾ ಯುವ ಸಂಭ್ರಮಕ್ಕೆ ಅದ್ಧೂರಿ ಚಾಲನೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಯುವ ಸಂಭ್ರಮದ ಉದ್ಘಾಟನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು ದೀಪ ಬೆಳಗುವುದರ ಮೂಲಕ ಯುವ ಸಂಭ್ರಮಕ್ಕೆ ಅದ್ಧೂರಿ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ರೋರಿಂಗ್ ಸ್ಟಾರ್ ಮುರುಳಿ ಮತ್ತು ರುಕ್ಮಿಣಿ ವಸಂತ ಅವರು ಡೊಳ್ಳು ಬಾರಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಖುಷಿಪಟ್ಟರು.

ಶಾಸಕ ಹರೀಶ್ ಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಸಿ. ಎನ್. ಮಂಜೇಗೌಡ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ. ಎಂ. ಗಾಯಿತ್ರಿ, ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಡಾ. ಪುಷ್ಪಾ ಅಮರನಾಥ್, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ದಸರಾ ಯುವ ಸಮಿತಿ ವಿಶೇಷಾಧಿಕಾರಿ ಎನ್. ವಿಷ್ಣುವರ್ಧನ್, ದಸರಾ ವಸ್ತಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

Tags:
error: Content is protected !!