Mysore
34
few clouds

Social Media

ಬುಧವಾರ, 01 ಏಪ್ರಿಲ 2026
Light
Dark

ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ: ಶಾಸಕ ಪ್ರದೀಪ್‌ ಈಶ್ವರ್‌

ಚಿಕ್ಕಬಳ್ಳಾಪುರ: ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡುವ ಮಾತೇ ಬರಲ್ಲ ಎಂದು ಶಾಸಕ ಪ್ರದೀಪ್‌ ಈಶ್ವರ್‌ ಹೇಳಿದ್ದಾರೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್‌ ದಾಖಲಾಗಿರುವ ಬಗ್ಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ. ಅವರೇ ನಮ್ಮ ಮುಖ್ಯಮಂತ್ರಿಗಳು, ಮುಂದಿನ ಮೂರುವರೆ ವರ್ಷ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಸಿದ್ದು ಪರ ಬ್ಯಾಟ್‌ ಮಾಡಿದರು.

ಇನ್ನು ಬಿಜೆಪಿಯವರು ಹೋರಾಟ ಮಾಡಬೇಕು. ಹಾಗಾಗಿ ಹೋರಾಟ ಮಾಡಲಿ. ಬಿಜೆಪಿ ಹಾಗೂ ಜೆಡಿಎಸ್‌ನವರ ಮೇಲೆ ಎಫ್‌ಐಆರ್‌ ಆಗಿಲ್ವಾ.? ಅವರು ರಾಜೀನಾಮೆ ಕೊಡಬೇಕು. ಅವರಿಗೊಂದು ನ್ಯಾಯ ನಮಗೊಂದು ನ್ಯಾಯನಾ ಎಂದು ಪ್ರಶ್ನೆ ಮಾಡಿದರು.

Tags:
error: Content is protected !!