Mysore
25
overcast clouds

Social Media

ಸೋಮವಾರ, 24 ಆಗಸ್ಟ್ 2026
Light
Dark

ಕಾಂಗ್ರೆಸ್ ವಿರುದ್ಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಾಗ್ದಾಳಿ

ಚಂಡೀಗಢ: ಹರಿಯಾಣ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ಮತ್ತು ಬಿಜೆಪಿ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದು, ಕಾಂಗ್ರೆಸ್‌ ಪಕ್ಷದ ವಿರುದ್ಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕಿಡಿಕಾರಿದ್ದಾರೆ.

ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಎರಡೂ ವರ್ಷಗಳಿಂದ ಅಧಿಕಾರದಲ್ಲಿದ್ದರೂ ಚುನಾವಣೆ ಸಂದರ್ಭದಲ್ಲಿ ನೀಡಿರುವ ಭರವಸೆ ಈಡೇರಿಸಿಲ್ಲ. ಕಾಂಗ್ರೆಸ್‌ ನಾಯಕರು ಕೇವಲ ಹಗರಣದಲ್ಲಿ ತೊಡಗಿದ್ದಾರೆ ಎಂದು ಕಿಡಿಕಾರಿದ್ದಾರೆ.

ಸರ್ಕಾರಿ ಉದ್ಯೋಗಳಲ್ಲಿ ಲಂಚ ಮತ್ತು ಒಲವು ಮೂಲಕ ಉದ್ಯೋಗದಲ್ಲೂ ಭ್ರಷ್ಟಾಚಾರ ನಡೆದಿದೆ. ಆದರೆ ಭವಿಷ್ಯದ ಭರವಸೆ ಹೊಂದಿರುವ ಯುವಕರು ಸರದಿ ಸಾಲಿನಲ್ಲಿಯೇ ನಿಂತಿದ್ದಾರೆ ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

 

Tags:
error: Content is protected !!