ಹುಬ್ಬಳ್ಳಿ: ರಾಜ್ಯ ರಾಜಕೀಯ ಕೆಳಮಟ್ಟದ ಹಂತ ತಲುಪಿದ್ದು, ವಿರೋಧ ಪಕ್ಷ ಹಣಿಯಲು ಅನೇಕ ಕೇಸ್ ದಾಖಲಿಸಿದಲ್ಲದೇ, ಹಿರಿಯ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಳ್ಳುವ ಮಟ್ಟಕ್ಕಿಳಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಸ್ವಜನ ಪಕ್ಷಪಾತ ಮಾಡುತ್ತಿದೆ. ರಾಜಕೀಯದಲ್ಲಿ ರಕ್ಷಣೆ ಇರುವ ಕಾರಣ ಅಧಿಕಾರಿಗಳಿಂದ ಕೀಳುಮಟ್ಟದ ಮಾತುಗಳು ಬರುತ್ತಿವೆ. ರಾಜ್ಯದಲ್ಲಿ ಇಂತಹ ಕೆಳಮಟ್ಟದ ರಾಜಕೀಯ ಹಿಂದೆ ಯಾವಾಗಲೂ ಆಗಿಲ್ಲ. ರಾಜ್ಯ ಸರ್ಕಾರ ತಮ್ಮ ಮೇಲೆ ಆರೋಪದ ಕಪ್ಪುಚುಕ್ಕೆ ಬಂದರೆ ಎಲ್ಲರಿಗೂ ಮಸಿ ಬಳಿಯುವ ಪ್ರಯತ್ನವಾಗುತ್ತಿದೆ. ಈ ಕೆಲಸ ಬಹಳಷ್ಟು ದಿನ ನಡೆಯುವುದಿಲ್ಲ. ಅಂತಿಮವಾಗಿ ಕಾನೂನು ತನ್ನ ಕೆಲಸವನ್ನು ತಾನು ಮಾಡುತ್ತದೆ ಎಂದು ವ್ಯಂಗ್ಯ ಮಾಡಿದ್ದಾರೆ.