Mysore
25
overcast clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

ಶಾಸಕ ಜಿ.ಟಿ.ದೇವೇಗೌಡ ವಿರುದ್ಧ ಸ್ನೇಹಮಯಿ ಕೃಷ್ಣ ವಾಗ್ದಾಳಿ

ಮೈಸೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಿಲ್ಲ ಎಂಬ ಶಾಸಕ ಜಿ.ಟಿ.ದೇವೇಗೌಡ ಹೇಳಿಕೆಗೆ ಸ್ನೇಹಮಯಿ ಕೃಷ್ಣ ಕಿಡಿಕಾರಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳ್ಳರು ಕಳ್ಳರು ಒಂದಾಗಿದ್ದಾರೆ ಎಂದು ಆರೋಪಿಸಿದರು. ಎಲ್ಲರೂ ತಮ್ಮ ತಮ್ಮ ರಕ್ಷಣೆಗಾಗಿ ಒಂದು ಕೂಟ ರಚನೆ ಮಾಡಿಕೊಂಡು ನನ್ನ ವಿರುದ್ಧ ಹೋರಾಟ ನಡೆಸಲು ಸಜ್ಜಾಗಿದ್ದಾರೆ. ಈಗ ಸಿದ್ದರಾಮಯ್ಯ ಪರ ಮಾತನಾಡಿರುವ ಜಿ.ಟಿ.ದೇವೇಗೌಡ ಕಳೆದ ಮೂರು ತಿಂಗಳಿನಿಂದ ಏನು ಮಾಡ್ತಾ ಇದ್ರು ಎಂದು ಪ್ರಶ್ನೆ ಮಾಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಮುಡಾದಲ್ಲಿ ಜಿ.ಟಿ.ದೇವೇಗೌಡ ಅವರದ್ದು ಕೂಡ ಅಕ್ರಮವಿರಬಹುದು. ಆ ಕಾರಣಕ್ಕೆ ಈಗ ಎಲ್ಲಾ ನಾಯಕರು ಒಂದಾಗಿದ್ದಾರೆ. ಎಲ್ಲದರ ಬಗ್ಗೆಯೂ ಇ.ಡಿಗೆ ಸಂಪೂರ್ಣ ಮಾಹಿತಿ ನೀಡುತ್ತೇನೆ ಎಂದು ಜಿಟಿಡಿ ವಿರುದ್ಧ ಹೊಸ ಬಾಂಬ್‌ ಸಿಡಿಸಿದ್ದಾರೆ.

 

Tags:
error: Content is protected !!