Mysore
27
light rain

Social Media

ಗುರುವಾರ, 13 ಆಗಸ್ಟ್ 2026
Light
Dark

ಶಾಸಕ ಜಿ.ಟಿ.ದೇವೇಗೌಡ ವಿರುದ್ಧ ಎಂಎಲ್‌ಸಿ ಎಚ್.ವಿಶ್ವನಾಥ್‌ ವಾಗ್ದಾಳಿ

ಮೈಸೂರು: ಮೈಸೂರು ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಾಸಕ ಜಿ.ಟಿ.ದೇವೇಗೌಡ ಭಾಷಣ ಕುರಿತು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಅಸಮಾಧಾನ ಹೊರಹಾಕಿದ್ದಾರೆ.

ಈ ಬಗ್ಗೆ ಮೈಸೂರಿನ ಜಲದರ್ಶಿನಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿ.ಟಿ.ದೇವೇಗೌಡರ ಭಾಷಣ ನೋಡಿದರೆ ಅವರು ಕೂಡ ಮುಡಾ ಫಲಾನುಭವಿ ಇರಬೇಕು. ದಸರಾ ಉದ್ಘಾಟನೆ ವೇದಿಕೆ ರಾಜಕೀಯ ನಾಯಕರ ವೇದಿಕೆ ಆಗಿತ್ತು. ಇಡೀ ಕಾರ್ಯಕ್ರಮ ಹೊಲಸು ಕಾರ್ಯಕ್ರಮ ಆಗೋಯ್ತು. ಚಾಮುಂಡಿ ಮಹಿಮೆ, ಜನರ ಸಹಕಾರದ ಮಾತುಗಳೇ ಇರಲಿಲ್ಲ. ಇನ್ನೆಂದೂ ದಸರಾ ಉದ್ಘಾಟನೆ ಕಾರ್ಯಕ್ರಮವೇ ಬೇಡ ಅನಿಸಿದೆ ಎಂದು ಬೇಸರ ವ್ಯಕ್ತಪಡಿಸಿದರು.

 

Tags:
error: Content is protected !!