ಶ್ರೀರಂಗಪಟ್ಟಣ: ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ದಸರಾ ಕುಸ್ತಿ ಪಂದ್ಯಾವಳಿಗೆ ಭಾನುವಾರ ಶಾಸಕ ಎ.ಬಿ.ರಮೇಶ್ ಬಂಡಿಸಿದ್ದೇಗೌಡ ಚಾಲನೆ ನೀಡಿದರು.
ಇಲ್ಲಿನ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯಾವಳಿಯಲ್ಲಿ 17 ಮಹಿಳಾ ತಂಡಗಳು ಸೇರಿ ಒಟ್ಟು 60 ಪೈಲ್ವಾನರು ಸೆಣಸಾಟ ನಡೆಸಲಿದ್ದಾರೆ.
ಶಾಸಕ ಎ.ಬಿ.ರಮೇಶ್ ಬಂಡಿಸಿದ್ದೇಗೌಡ ಅವರು ಪೈಲ್ವಾನರುಗಳಿಗೆ ಬೆನ್ನು ತಟ್ಟುವ ಮೂಲಕ ಕುಸ್ತಿ ಸೆಣಸಾಟಕ್ಕೆ ಚಾಲನೆ ನೀಡಿದರು. ಈ ವೇಳೆ, ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು..