Mysore
21
overcast clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಮೈಸೂರಿನಿಂದ ದರ್ಭಾಂಗ್‌ಗೆ ತೆರಳುತ್ತಿದ ಎಕ್ಸ್‌ಪ್ರೆಸ್‌, ಗೂಡ್ಸ್‌ ರೈಲಿಗೆ ಡಿಕ್ಕಿ: ಹೊತ್ತಿ ಉರಿದ ಬೋಗಿಗಳು

ಚೆನ್ನೈ: ಮೈಸೂರಿನಿಂದ ದರ್ಭಾಂಗ್‌ಗೆ ತೆರಳುತ್ತಿದ್ದ ಭಾಗಮತಿ ಎಕ್ಸ್‌ಪ್ರೆಸ್‌ ರೈಲು, ಚೆನ್ನೈ ಸಮೀಪದ ಗುಮ್ಮುಡಿಪೂಂಡಿಯ ಬಳಿ ಶುಕ್ರವಾರ ರಾತ್ರಿ ಗೂಡ್ಸ್‌ ರೈಲಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ 13ಬೋಗಿಗಳು ಹಳಿತಪ್ಪಿದ್ದು, ಡಿಕ್ಕಿಯ ರಭಸಕ್ಕೆ ಎರಡು ಬೋಗಿಗಳು ಹೊತ್ತಿ ಉರಿದಿವೆ.

ರಾತ್ರಿ ಸು.8:28ರ ವೇಳೆಗೆ ಘಟನೆ ನಡೆದಿದ್ದು, ಕನಿಷ್ಟ 19ಮಂದಿಗೆ ಗಾಯವಾಗಿದೆ. ಅಪಘಾಯಕ್ಕೀಡಾದ ರೈಲು75 ಕಿ.ಮೀ ವೇಗದಲ್ಲಿ ಚಲಿಸುತ್ತಿತ್ತು ಎಂದು ದಕ್ಷಿಣ ರೈಲ್ವೆ ತಿಳಿಸಿದೆ.

ರೈಲು ಪೊನ್ನೇರಿ ನಿಲ್ದಾಣ ದಾಟಿದ್ದ ವೇಳೆಗೆ, ಕವರೈಪೆಟ್ಟೈ ನಿಲ್ದಾಣ ಪ್ರವೇಶಿಸಿಲು ಗ್ರೀನ್‌ ಸಿಗ್ಲನ್‌ ನೀಡಲಾಗಿತ್ತು. ಈ ಪ್ರಕಾರ ಮುಖ್ಯ ಮಾರ್ಗಕ್ಕೆ ಹೋಗುವ ಬದಲು, ಲೂಪ ಹಳಿಗೆ ಪ್ರವೇಶಿಸಿ, ಆ ಹಳಿಯಲ್ಲಿ ನಿಂತಿದ್ದ ಗೂಡ್ಸ್‌ ರೈಲಿಗೆ ಡಿಕ್ಕಿಯಾಗಿದೆ. ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ದಕ್ಷಿಣ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.

ಘಟನೆಯಲ್ಲಿ 19 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ 14 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಮಿಳುನಾಡು ಸರ್ಕಾರದ ಮೂಲಗಳು ತಿಳಿಸಿವೆ.

Tags: