Mysore
28
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಮಂಡ್ಯ: ಕಬ್ಬಿನ ಗದ್ದೆಯಲ್ಲಿ ಭಾರೀ ಗಾತ್ರದ ಹೆಬ್ಬಾವು ರಕ್ಷಣೆ

ಮಂಡ್ಯ: ತಾಲ್ಲೂಕಿನ ದುದ್ದ ಹೋಬಳಿಯ ಬೀಚನಹಳ್ಳಿ ಗ್ರಾಮವೊಂದರ ಕಬ್ಬಿನ ಗದ್ದೆಯಲ್ಲಿ, ಕಬ್ಬು ಕಟಾವು ಮಾಡುತ್ತಿದ್ದ ವೇಳೆ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅದನ್ನು ಸೆರೆಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಲಾಗಿದೆ.

ಗ್ರಾಮದ ನಿವಾಸಿ ಪುಟ್ಟಸ್ವಾಮಿ ಗೌಡ ಅವರ ಕಬ್ಬಿನ ಗದ್ದೆಯಲ್ಲಿ ಕಬ್ಬು ಕಟಾವು ಮಾಡುತ್ತಿದ್ದ ವೇಳೆ ಸರಿ ಸುಮಾರು 12 ಅಡಿ ಉದ್ದ 35 —40 ಕಿಲೋ ತೂಕದ ಇಂಡಿಯನ್ ರಾಕ್ ಪೈಥಾನ್ (ಹೆಬ್ಬಾವು) ಕಾಣಿಸಿಕೊಂಡಿದ್ದು, ಈ ವೇಳೆ ಕಾರ್ಮಿಕರು ಬೆಚ್ಚಿ ಬಿದ್ದಿದ್ದಾರೆ. ಈ ವೇಳೆ ಎಚ್ಚೆತ್ತುಕೊಂಡ ಜಮೀನಿನ ಮಾಲೀಕ ಸರ್ಪ ಮಿತ್ರ ವೈದ್ಯ ಕುದರುಗುಂಡಿ ಮಹೇಶ್ ಕುಮಾರ್ ಅವರಿಗೆ ದೂರವಾಣಿ ಕರೆ ಮಾಡಿ ಸ್ಥಳಕ್ಕೆ ಕರೆಯಿಸಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಮಹೇಶ್‌ ಕುಮಾರ್‌ ಅವರು ಹೆಬ್ಬಾವನ್ನು ಸುರಕ್ಷಿತವಾಗಿ ಹಿಡಿದು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಒಪ್ಪಿಸಿದರು.

ಸುಮಾರು ವರ್ಷಗಳಿಂದ 5000ಕ್ಕೂ ಹೆಚ್ಚು ಉರಗ ಮತ್ತು ವನ್ಯ ಜೀವಿಗಳನ್ನು ರಕ್ಷಿಸುತ್ತಾ, ಅರಣ್ಯ ಇಲಾಖೆಗೆ ಸಹಾಯ ಮಾಡುತ್ತಿರುವ ಸ್ವಯಂಸೇವಕ ಸರ್ಪ ಮಿತ್ರ ಕುದರುಗುಂಡಿ ವೈದ್ಯ ಮಹೇಶ್ ಕುಮಾರ್ ಮತ್ತು ಇಲಾಖೆಯ ಕಾರ್ಯವನ್ನು ಗ್ರಾಮಸ್ಥರು ಶ್ಲಾಘಿಸಿದರು. ಈ ವೇಳೆ ಅರಣ್ಯ ಇಲಾಖೆಯ ಗಸ್ತು ಅರಣ್ಯ ಪಾಲಕ ಸಿ. ರಾಜೇಶ್, ಹೆಚ್. ಪ್ರತಾಪ್ ಮತ್ತು ವಾಹನ ಚಾಲಕ ಚಂದ್ರು ಇದ್ದರು.

Tags: