Mysore
33
scattered clouds

Social Media

ಸೋಮವಾರ, 06 ಏಪ್ರಿಲ 2026
Light
Dark

ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಎಂದ ಡಿ.ಕೆ.ಶಿವಕುಮಾರ್‌

ಮೈಸೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನಾನೇ ಅಭ್ಯರ್ಥಿಯಾಗುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಇನ್ನೇನು ಕೆಲವೇ ದಿನಗಳಲ್ಲಿ ಉಪಚುನಾವಣೆ ದಿನಾಂಕ ಘೋಷಣೆಯಾಗಲಿದೆ.

ಈ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದು, ಇನ್ನೊಂದೆಡೆ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್‌ನಿಂದ ನಿಖಿಲ್‌ ಕುಮಾರಸ್ವಾಮಿ ಅವರ ಹೆಸರು ಕೇಳಿಬರುತ್ತಿದೆ.

ಇನ್ನು ಕಾಂಗ್ರೆಸ್‌ನಲ್ಲಿ ಅಭ್ಯರ್ಥಿ ಆಯ್ಕೆಗೆ ಕಸರತ್ತು ನಡೆಯುತ್ತಿದೆ. ಹೀಗಿರುವಾಗಲೇ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಎಂದು ಹೇಳಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನನ್ನ ಕುಟುಂಬದವರು ನಿಲ್ಲಲ್ಲ. ಎಲ್ಲಿ ಹೋದರೂ ನನ್ನ ಹೆಸರೇ ಓಡಾಡುತ್ತಿದೆ. ಹಾಗಾಗಿ ನಾನೇ ಅಭ್ಯರ್ಥಿ ಎಂದರು.

ಈ ಮೂಲಕ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಡಿಕೆಶಿ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗಿದ್ದು, ಮುಂದಿನ ದಿನಗಳಲ್ಲಿ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

 

Tags:
error: Content is protected !!