Mysore
32
few clouds

Social Media

ಶುಕ್ರವಾರ, 10 ಏಪ್ರಿಲ 2026
Light
Dark

ಸಿಎಂ ಸಿದ್ದರಾಮಯ್ಯ ವಿರುದ್ಧ ಕೆ.ಎಸ್‌.ಈಶರಪ್ಪ ಕಿಡಿ

ಶಿವಮೊಗ್ಗ: ಮುಡಾ ಪ್ರಕರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ತಾಯಿ ಚಾಮುಂಡೇಶ್ವರಿ ಮತ್ತು ಸವದತ್ತಿ ರೇಣುಕಾ ಯಲ್ಲಮ್ಮ ರಕ್ಷಣೆ ಕೊಡಬೇಕಾ? ಸಿಎಂ ಅವರು ಮಸ್ಲಿಂಮರು ಮತ್ತು ಗೂಂಡಾಗಳ ಪರ ಇದ್ದರೆ ಹೇಗೆ ಕಾಪಾಡುತ್ತಾರೆ? ಚಾಮುಂಡೇಶ್ವರಿ ತಾಯಿ ಮಹಿಷಾಸುರನನ್ನು ಸಂಹಾರ ಮಾಡಿದ ರೀತಿಯಲ್ಲಿಯೇ ನೀವು ಸಂಹಾರ ಆಗ್ತೀರಾ ಎಂದು     ಕೆ.ಎಸ್‌.ಈಶರಪ್ಪ ಕಿಡಿಕಾರಿದ್ದಾರೆ.

ಈ ಬಗ್ಗೆ ಶಿವಮೊಗ್ಗ ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಮೊದಲು ಕುಂಕುಮ ಹಚ್ಚಲು ಹೋದರೆ ಮೈಮೇಲೆ ದೆವ್ವ ಬಂದ ರೀತಿಯಲ್ಲಿ ಆಡುತ್ತಿದ್ದರು. ಆದರೆ, ಇದೀಗ ಅವರೇ ದೇವಾಲಯಗಳಿಗೆ ಹೋಗಿ ಕುಂಕುಮ ಹಚ್ಚಿಕೊಳ್ಳುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ರಾಜ್ಯದಲ್ಲಿ ಜಾತಿ ಜನಗಣತಿಯನ್ನು ಅಕ್ಟೋಬರ್.18ಕ್ಕೆ ಮಂಡಿಸುತ್ತೇನೆ ಎಂದು ಹೇಳಿದ್ದರು. ಆದರೆ, ಇದೀಗ 18ಕ್ಕೆ ಆಗಲ್ಲ ಮುಂದೂಡುತ್ತೇನೆ ಎಂದಿದ್ದಾರೆ. ಅಲ್ಲದೇ, ಅಕ್ಟೋಬರ್‌.25ಕ್ಕೆ ಮಂಡನೆ ಮಾಡುತ್ತೇವೆ ಎನ್ನುತ್ತಾರೆ. ನೋಡೋಣ ಮುಂದಿನಗಳಲ್ಲಿ ಏನಾಗುತ್ತದೆ ಎಂಬುದು ತಿಳಿಯುತ್ತದೆ. ಜಾತಿ ಜನಗಣತಿಗಾಗಿ ಒಂಭತ್ತು ವರ್ಷಗಳೇ ಕಾದಿದ್ದೇವೆ ಇನ್ನೂ ಒಂದು ವಾರಗಳು ಕಾಯಲು ಆಗೋದಿಲ್ವಾ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

Tags:
error: Content is protected !!