Mysore
28
scattered clouds

Social Media

ಭಾನುವಾರ, 01 ಫೆಬ್ರವರಿ 2026
Light
Dark

ಮುಡಾ ಪ್ರಕರಣ: ಸಚಿವ ಬೈರತಿ ಸುರೇಶ್‌ ಅವರೇ ನಿಜವಾದ ಕಳ್ಳ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಪ್ರಕರಣದಲ್ಲಿ ನಿಜವಾದ ಕಳ್ಳ ಸಚಿವ ಬೈರತಿ ಸುರೇಶ್‌ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಗಂಭೀರವಾಗಿ ಆರೋಪ ಮಾಡಿದ್ದಾರೆ.

ಸಚಿವ ಬೈರತಿ ಸುರೇಶ್‌ ಅವರು ನಿನ್ನೆ ಛಲವಾದಿ ನಾರಾಯಣಸ್ವಾಮಿ ಮುಡಾ ದಾಖಲೆಯನ್ನು ಕದ್ದಿರಬಹುದು ಎಂದು ಆರೋಪ ಮಾಡಿದ್ದರು. ಈ ಆರೋಪದ ಕುರಿತು ಛಲವಾದಿ ನಾರಾಯಣಸ್ವಾಮಿ ಇಂದು(ಅಕ್ಟೋಬರ್‌.19) ಬಿಜೆಪಿ ಕಚೇರಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದು ಇ.ಡಿ. ತನಿಖಾ ತಂಡವು ನಿನ್ನೆ(ಶುಕ್ರವಾರ) ಮುಡಾ ಕಚೇರಿ ಮೇಲೆ ರೇಡ್‌ ಮಾಡಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ. ಹೀಗಾಗಿ ನಾನು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದೆ. ಬಳಿಕ ಸುರೇಶ್‌ ಅವರು ಹೆಲಿಕಾಫ್ಟರ್‌ನಲ್ಲಿ ಹೋಗಿ ದಾಖಲೆ ತೆಗೆದುಕೊಂಡು ಬಂದಿದ್ದಾರೆ ಎಂಬ ವಿಚಾರ ಚರ್ಚೆಗೆ ಗ್ರಾಸವಾಗಿತ್ತು. ಹೀಗಾಗಿ ಸಚಿವ ಬೈರತಿ ಅವರನ್ನು ಸಹ ತನಿಖೆ ನಡೆಸಬೇಕು ಎಂದು ಹೇಳಿದ್ದೆ ಅಷ್ಟೇ. ಆದರೆ ಸುರೇಶ್‌ ಅವರು ನನ್ನನ್ನೇ ಕಳ್ಳ ಅಂದಿದ್ದು ನಿಜವಾದ ಕಳ್ಳ ಅವರೇ ಆಗಿದ್ದಾರೆ ಎಂದು ತಿರುಗೇಟು ನೀಡಿದರು.

ಸುರೇಶ್‌ ಅವರೇ ನೀವು ಮಂತ್ರಿ ಆಗೋಕೆ ಯೋಗ್ಯರಲ್ಲ. ನಾನು ಮುಡಾ ದಾಖಲೆಗಳನ್ನು ಕದ್ದಿದ್ದರೆ ನೀವು ಸಚಿವರಾಗಿ ಏನು ಕಡ್ಲೆಪುರಿ ಅಥವಾ ಚುರುಮುರಿ ತಿನ್ನುತ್ತಿದ್ದರೇ? ತಾವು ಮುಡಾ ಸಚಿವರಾಗಿ ನನ್ನ ಮೇಲೆ ದೂರು ದಾಖಲಿಸಬಹುದಿತ್ತು ಅಲ್ಲವೇ? ಎಂದು ವಾಗ್ದಾಳಿ ಮಾಡಿದ್ದಾರೆ.

ಮುಡಾ ಪ್ರಕರಣ ರಾಜ್ಯದಲ್ಲಿ ದೊಡ್ಡ ಸುದ್ದಿಯಾದ ಕೂಡಲೇ ಹೆಲಿಕಾಫ್ಟರ್‌ನಲ್ಲಿ ಮುಡಾ ಕಚೇರಿಗೆ ಹೋಗಿ ದಾಖಲೆಗಳನ್ನು ತಂದಿದ್ದು ಸುರೇಶ್‌. ಆ ದಿನ ಅಲ್ಲಿಂದ ಮುಡಾ ದಾಖಲೆಗಳನ್ನು ತರದೇ ಹೋಗಿದ್ದರೆ, ಇವತ್ತಿನ ದಿನ ಈ ಕೇಸ್‌ ಇಷ್ಟೊಂದು ಹೈಪ್‌ ಆಗುತ್ತಿರಲಿಲ್ಲ. ಸಿಎಂ ಸಿದ್ದರಾಮಯ್ಯ ಅವರನ್ನು ಸಿಕ್ಕಿಸಿದ್ದೇ ಸುರೇಶ್ ಎಂದು ಆರೋಪಿಸಿದ್ದಾರೆ.

Tags:
error: Content is protected !!