Mysore
21
overcast clouds

Social Media

ಭಾನುವಾರ, 16 ಆಗಸ್ಟ್ 2026
Light
Dark

ಜೋತು ಬಿದ್ದಿದ್ದ ವಿದ್ಯುತ್ ತಂತಿಗೆ ಸಿಲುಕಿ ಇಬ್ಬರು ರೈತರ ಸಾವು

ಚಾಮರಾಜನಗರ: ತಾಲೂಕಿನ ಅಯ್ಯನಪುರ ಗ್ರಾಮದ ಬಳಿ ಜಮೀನಿಗೆ ಹೋಗುತ್ತಿದ್ದ ರೈತರಿಬ್ಬರು ಮಾರ್ಗ ರಸ್ತೆಯಲ್ಲಿ ಜೋತು ಬಿದ್ದಿದ್ದ ವಿದ್ಯುತ್ ತಂತಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಬುಧವಾರ ( ಅಕ್ಟೋಬರ್‌ 23 ) ಸಂಜೆ ನಡೆದಿದೆ.

ತಾಲ್ಲೂಕಿನ ಅಯ್ಯನಪುರ ಗ್ರಾಮದ ನಿವಾಸಿ ನಾಗೇಂದ್ರ( 45 ) ಮಲ್ಲೇಶ (48) ಮೃತ ದುರ್ದೈವಿಗಳು. ಈ ಇಬ್ಬರು ರೈತರು ತಮ್ಮ ಜಮೀನಿಗೆ ತೆರಳು ರಾತ್ರಿ ಬೈಕ್‌ನಲ್ಲಿ ಹೋಗುತ್ತಿದ್ದಾಗ ಜೋತು ಬಿದ್ದಿರುವ ತಂತಿ ಬೈಕ್ ಸವಾರನ ಕುತ್ತಿಗೆಗೆ ಸಿಲುಕಿದ್ದು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಸೆಸ್ಕಾಂ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನಿಡಿ ಮಹಜರು ಮಾಡಿದ್ದಾರೆ. ಕುಟುಂಬಸ್ಥರ ರೋಧನೆ ಹೇಳತೀರದ್ದಾಗಿದೆ. ರೈತ ಮುಖಂಡರು ಹಾಗೂ ಗ್ರಾಮಸ್ಥರು ಸೆಸ್ಕಾಂ ಅಧಿಕಾರಿಗಳ ಬೇಜವಾಬ್ದಾರಿಯೇ ಇದಕ್ಕೆ ಕಾರಣ ಎಂದು ಆರೋಪಿಸಿ ಸ್ಥಳದಲ್ಲಿ ಪ್ರತಿಭಟನೆ ನಡೆಸಿದರು.

Tags:
error: Content is protected !!