Mysore
18
clear sky

Social Media

ಭಾನುವಾರ, 15 ಫೆಬ್ರವರಿ 2026
Light
Dark

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವನ್‌, ನಂದೀಶ್‌ ಜಾಮೀನು ಅರ್ಜಿ ವಜಾ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಪವನ್‌ ಮತ್ತು ನಂದೀಶ್‌ಗೆ ಇಲ್ಲಿನ ಸೇಷನ್ಸ್‌ ಕೋರ್ಟ್‌ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ನ.20) ಆರೋಪಿಗಳಾದ ಪವನ್‌ ಮತ್ತು ನಂದೀಶ್‌  ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ಸೇಷನ್ಸ್‌ ಕೋರ್ಟ್‌ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

ಹೀಗಾಗಲೇ  ದರ್ಶನ್‌ಗೆ ಹೈಕೋರ್ಟ್‌ ಆರು ವಾರಗಳ ಕಾಲ ಷರತ್ತು ಬದ್ಧ ಮಧ್ಯಂತರ ಜಾಮೀನು ನೀಡಿದೆ. ಆದರೆ ಪೊಲೀಸ್‌ ಇಲಾಖೆಯೂ ಮಧ್ಯಂತರ ಜಾಮೀನು ಅರ್ಜಿಯನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಈಗಾಗಲೇ ಸಿದ್ಧತೆ ಮಾಡಿಕೊಂಡಿದೆ. ಈ ಮಧ್ಯೆಯೇ ಇಬ್ಬರು ಆರೋಪಿಗಳ ಜಾಮೀನನ್ನು ಸೆಷನ್ಸ್‌ ಕೋರ್ಟ್‌ ವಜಾಗೊಳಿಸಿದೆ.

Tags:
error: Content is protected !!