Mysore
20
clear sky

Social Media

ಶುಕ್ರವಾರ, 06 ಮಾರ್ಚ್ 2026
Light
Dark

ಸಾಹಿತ್ಯ ಸಮ್ಮೇಳನ: ಸರ್ವಾಧ್ಯಕ್ಷರಾಗಿ ಗೊ.ರು.ಚನ್ನಬಸಪ್ಪ ಆಯ್ಕೆ: ಕುಮಾರಸ್ವಾಮಿ ಅಭಿನಂದನೆ

ಬೆಂಗಳೂರು: ಸಕ್ಕರೆನಾಡು ಮಂಡ್ಯದಲ್ಲಿ ನಡೆಯಲಿರುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಸಾಹಿತಿ ಗೊ.ರು.ಚನ್ನಬಸಪ್ಪ ಅವರಿಗೆ ಮಂಡ್ಯ ಲೋಕಸಭೆ ಸದಸ್ಯರು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ಕನ್ನಡ ಪರಿಚಾರಿಕೆ, ಸಂಘಟನೆ, ಜಾನಪದ, ಶಿಕ್ಷಣ, ಮಾಧ್ಯಮ ಸೇರಿ ಹಲವು ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡವರು ಗೊರುಚ ಅವರು, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿಯೂ ಅವರು ಅನನ್ಯ ಸೇವೆ ಸಲ್ಲಿಸಿದ್ದಾರೆ. ಸ್ವಾತಂತ್ರ್ಯ ಹೋರಾಟಕ್ಕೂ ಧುಮುಕಿದ್ದ ಗೊ.ರು.ಚನ್ನಬಸಪ್ಪ ಅವರು, ಕನ್ನಡ ನಾಡುನುಡಿಗೆ ಅಪಾರ ಕೊಡುಗೆ ನೀಡಿರುವ ಸಂಗತಿಯನ್ನು ಸ್ಮರಣೆ ಮಾಡಿಕೊಂಡಿದ್ದಾರೆ.

ಅಲ್ಲದೆ; ಗೊ.ರು.ಚನ್ನಬಸಪ್ಪ ಅವರು ಲೋಕಸಭೆಯಲ್ಲಿ ನಾನು ಪ್ರತಿನಿಧಿಸುವ ಮಂಡ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸುತ್ತಿರುವುದು ನನ್ನ ಸಂತೋಷವನ್ನು ಇಮ್ಮಡಿಗೊಳಿಸಿದೆ ಕೇಂದ್ರ ಸಚಿವರು ಹೇಳಿದ್ದಾರೆ.

Tags:
error: Content is protected !!