Mysore
28
broken clouds

Social Media

ಭಾನುವಾರ, 19 ಏಪ್ರಿಲ 2026
Light
Dark

ಮಡಿಕೇರಿ: ಸರ್ಕಾರಿ ಬಸ್‌-ಬೈಕ್‌ ನಡುವೆ ಅಪಘಾತ

ಮಡಿಕೇರಿ: ರಾಜ್ಯ ಸಾರಿ ಸಂಸ್ಥೆ ಬಸ್‌ ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ವಿರಾಜಪೇಟೆ ತಾಲೂಕು ಬಿಟ್ಟಂಗಲ ಜಂಕ್ಷನ್‌ ಬಳಿ ಮಂಗಳವಾರ ನಡೆದಿದೆ.

ಬೈಕ್ ಸವಾರನ ಕಾಲು ಮುರಿತಕ್ಕೆ ಒಳಗಾಗಿದ್ದು, ಗಂಭೀರ ಸ್ವರೂಪದ ಗಾಯಗಳಾಗಿವೆ. ಸಾರ್ವಜನಿಕರು ಬೈಕ್ ಸವಾರನನ್ನು ವಿರಾಜಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ವಿರಾಜಪೇಟೆಯಿಂದ ಹುಣಸೂರಿಗೆ ತೆರಳುತ್ತಿದ್ದ ಸರಕಾರಿ ಬಸ್ಸಿಗೆ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷ ದರ್ಶಿಗಳು ಹೇಳಿದ್ದಾರೆ. ಇದೇ ಸಂದರ್ಭ ಕೆಲವರು ಬಸ್ ಚಾಲಕನ ಮೇಲೆ ಹಲ್ಲೆಗೂ ಯತ್ನಿಸಿದ್ದಾರೆ ಎಂದು  ತಿಳಿದು ಬಂದಿದೆ.

Tags:
error: Content is protected !!