Mysore
29
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

ಸಂವಿಧಾನ ಬದಲಾಯಿಸುತ್ತೇವೆ ಎಂದವರನ್ನು ಜನ ಬದಲಾಯಿಸಿದರು: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇಶದ ಸಂವಿಧಾನವನ್ನು ಹರಿದು ಹಾಕುತ್ತೇವೆ ಎಂದವರು ಮನೆಗೆ ಹೋಗಿದ್ದಾರೆ. ಇನ್ನು ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದ ಬಿಜೆಪಿ ನಾಯಕರನ್ನು ಜನರು ಬದಲಾಯಿಸಿದರು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ವಸಂತನಗರದಲ್ಲಿ ಇಂದು(ನ.26) ಅಂಬೇಡ್ಕರ್‌ ಭವನದಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಹೇಳುತ್ತಿದ್ದವರಿಗೆ ತಿರುಗೇಟು ನೀಡಲು ಸಂಸದ ರಾಹುಲ್‌ ಗಾಂಧಿಯವರು ಪ್ರತಿಯೊಂದು ಭಾಷಣದ ವೇಳೆ ಸಂವಿಧಾನದ ಪ್ರತಿ ಹಿಡಿದು ಭಾಷಣವನ್ನು ಆರಂಭಿಸುತ್ತಿದ್ದರು. ಹೀಗಾಗಿ ಪ್ರಧಾನಮಂತ್ರಿ ಅವರು ಕೂಡ ಸಂವಿಧಾನ ಪ್ರತಿಗೆ ನಮಸ್ಕರಿಸಿ ಪ್ರಮಾಣ ವಚನ ಸ್ವೀಕಾರ ಮಾಡುವಂತಾಯಿತು. ಅಲ್ಲದೇ ನಮ್ಮ ಇಂಡಿಯಾ ಒಕ್ಕೂಟದ ಸಂಸದರು ಸಂವಿಧಾನ ಪ್ರತಿ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ್ದು ಎಂದು ಇತಿಹಾಸ ಎಂದು ಹೇಳಿದ್ದಾರೆ.

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಹೋರಾಟ ಮಾಡದೇ ಇದ್ದರೂ ಪರವಾಗಿಲ್ಲ ಮಾರಾಟ ಮಾತ್ರ ಆಗಬೇಡ ಎಂಬ ಕಿವಿ ಮಾತನ್ನು ರಾಜಕಾರಣಿಗಳಿಗರ ಹೇಳಿದ್ದರು. ಬಳಿಕ ನಾವುಗಳು ಇತಿಹಾಸದಿಂದ ಪಾಠ ಕಲಿಯದೇ ಯಾವುದೇ ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂದು ಸಂದೇಶವನ್ನು ನೀಡಿದ್ದರು. ಆದರೆ ಪ್ರಸ್ತುತ ದಿನಗಳಲ್ಲಿ ಹಲವು ರಾಜ್ಯಗಳಲ್ಲಿ ಜನರಿಂದ ಆಯ್ಕೆಯಾದ ಶಾಸಕರು ಮಾರಾಟವಾಗಿರುವ ನಿದರ್ಶನಗಳನ್ನು ನೋಡುತ್ತಿದ್ದೇವೆ. ಇತಿಹಾಸವನ್ನು ಮರೆತವನು ಇತಿಹಾಸವನ್ನು ಸೃಷ್ಠಿಸಲು ಸಾಧ್ಯವಿಲ್ಲ ಎಂದು ಕಿವಿಮಾತನ್ನು ಬಿಟ್ಟು ಹೋಗಿದ್ದಾರೆ. ಅದರಂತೆಯೇ ಆಯಾಯ ಧರ್ಮದವರು ಅವರ ಧರ್ಮ ಗ್ರಂಥಗಳನ್ನು ಪವಿತ್ರ ಎಂದು ಹೇಳುತ್ತಾರೋ, ಹಾಗೇಯೇ ಇಡೀ ಭಾರತಕ್ಕೆ ಸಂವಿಧಾನವೇ ಪವಿತ್ರ ಗ್ರಂಥವಾಗಿದೆ ಎಂದಿದ್ದಾರೆ.

 

Tags: