Mysore
23
scattered clouds

Social Media

ಶುಕ್ರವಾರ, 21 ಆಗಸ್ಟ್ 2026
Light
Dark

ಸುಳ್ಳು ಆರೋಪ ಮೂಲಕ ಸಿಎಂ ಅಸ್ಥಿರಕ್ಕೆ ಯತ್ನ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಸಿಎಂ ಸಿದ್ದರಾಮಯ್ಯ ಮೇಲಿನ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳಾದ ಬಿಜೆಪಿ, ಜೆಡಿಎಸ್ ಸುಳ್ಳು ಆರೋಪಗಳ ಮೂಲಕ ಅವರನ್ನು ಮುಗಿಸಲು ಮುಂದಾಗಿವೆ. ಆದರೆ ಯಾವುದೇ ಕಾರಣಕ್ಕೂ ಸಿಎಂ ರಾಜೀನಾಮೆ ನೀಡಲ್ಲ  ಎಂದು ಎಂಎಲ್‌ಸಿ ಯತಿಂದ್ರ ಸಿದ್ದರಾಮಯ್ಯ ಹೇಳಿದರು.

ಮೈಸೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ವಿರೋಧ ಪಕ್ಷಗಳು ಸುಳ್ಳು ಆರೋಪಗಳ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸ ಮಾಡುತ್ತಿವೆ. ಬಿಜೆಪಿಗೆ ಮುಖ್ಯ ಟಾರ್ಗೆಟ್‌ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ಅದಕ್ಕೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಡ್ಡಗಾಲಾಗಿ ಇರುವುದರಿಂದ ಮೊದಲು ಅವರನ್ನು ಮುಗಿಸಲು ಇಲ್ಲಸಲ್ಲದ ಆರೋಪಗಳ ಮಾಡಿ ಅವರ ವರ್ಚಸ್ಸಿಗೆ ಧಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಜನಪರ ಕಾರ್ಯಕ್ರಮಗಳನ್ನು ನೀಡುವ ಮೂಲಕ ಜನಸ್ನೇಹಿ ಆಗಿರುವ, ಜನರಿಂದ ರಚನೆ ಆಗಿರುವ ಕಾಂಗ್ರೆಸ್‌ ಸರ್ಕಾರವನ್ನು ಹೇಗಾದರು ಮುಗಿಸುವ ಮೂಲಕ ಅಧಿಕಾರಕ್ಕೆ ಬರಬೇಕು ಎನ್ನುವುದು ಬಿಜೆಪಿಯ ಕುತಂತ್ರ.  ಸಿಎಂ ತಪ್ಪು ಮಾಡದಿದ್ರು ತನಿಖಾ ಸಂಸ್ಥೆಗಳನ್ನು ದೂರುಪಯೋಗಪಡಿಸಿಕೊಂಡು ಸಿದ್ದರಾಮಯ್ಯ ರಾಜೀನಾಮೆಗೆ ಯತ್ನಿಸುತ್ತಿವೆ ಎಂದರು.

 

 

 

Tags:
error: Content is protected !!