Mysore
21
broken clouds

Social Media

ಮಂಗಳವಾರ, 07 ಏಪ್ರಿಲ 2026
Light
Dark

ಅಧಿವೇಶನ | ಶಾಸಕ ಶ್ರೀವತ್ಸ ಪ್ರಶ್ನೆಗೆ ಸಚಿವ ಬೈರತಿ ಸುರೇಶ್‌ ಉತ್ತರ

ಬೆಳಗಾವಿ: ಮೈಸೂರು ಮಹಾನಗರ ಪಾಲಿಕೆಯ ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ರಾಜಕಾಲುವೆಗಳಿಗೆ 4,665 ಲಕ್ಷ ರೂ.ಗಳ ಅನುದಾನದಡಿಯಲ್ಲಿ ತಡೆಗೋಡೆಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ವಿಧಾನಸಭೆಗೆ ತಿಳಿಸಿದರು.

ಪ್ರಶ್ನೋತ್ತರ ಅವಧಿಯಲ್ಲಿ ಕೃಷ್ಣರಾಜ ಕ್ಷೇತ್ರದ ಶಾಸಕ ಶ್ರೀವತ್ಸ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜಕಾಲುವೆಗಳ ಒಟ್ಟು ವಿಸ್ತೀರ್ಣ 11,78,74.50 ಚದರ ಮೀಟರ್ ಆಗಿದೆ. ಮೈಸೂರು ನಗರ ಪಾಲಿಕೆಯ ಅನುದಾನದ ಲಭ್ಯತೆಗೆ ಅನುಗುಣವಾಗಿ ರಾಜಕಾಲುವೆಗಳಿಗೆ ತಡೆಗೋಡೆ ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.

Tags:
error: Content is protected !!