Mysore
31
broken clouds

Social Media

ಮಂಗಳವಾರ, 14 ಜುಲೈ 2026
Light
Dark

ಡಿ ಗ್ಯಾಂಗ್‌ಗೆ ಜಾಮೀನು; ರೇಣುಕಾಸ್ವಾಮಿ ತಂದೆ ಕಾಶಿನಾಥ್‌ ಪ್ರತಿಕ್ರಿಯೆ

renukaswamy father

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಹಾಗೂ ಪವಿತ್ರ ಗೌಡ ಸೇರಿದಂತೆ ಇನ್ನಿತರ ಆರೋಪಿಗಳಿಗೆ ಹೈಕೋರ್ಟ್‌ ಜಾಮೀನು ನೀಡಿದೆ. ಇದಕ್ಕೆ ರೇಣುಕಸ್ವಾಮಿ ತಂದೆ ಕಾಶಿನಾಥ್‌ ತಂಬಾ ನಿರಾಸೆ ವ್ಯಕ್ತಪಡಿಸಿದ್ದಾರೆ.

ಜಾಮೀನು ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಗನ ಸಾವಿನ ವಿಚಾರಕ್ಕೆ ಭಾವುಕರಾದರು. ನ್ಯಾಯಾಲಯದ ಮೇಲೆ ನಮಗೆ ಸಂಪೂರ್ಣ ವಿಶ್ವಾಸವಿದೆ. ತಾತ್ಕಾಲಿಕವಾಗಿ ಆರೋಪಿಗಳಿಗೆ ಜಾಮೀನು ಸಿಕ್ಕಿರಬಹುದು ಆದರೆ ಈ ಪ್ರಕರಣದಲ್ಲಿ ತಪ್ಪು ಯಾರದ್ದು ಇರುತ್ತೋ ಅವರಿಗೆ ಅಂತಿಮವಾಗಿ ಶಿಕ್ಷೆ ಆಗುತ್ತದೆ ಎನ್ನುವ ನಂಬಿಕೆಯಿದೆ ಎಂದು ಹೇಳಿದರು.

ಮುಂದುವರಿದು ಮಾತನಾಡುತ್ತಾ, ಕಾನೂನಿನ ಅಡಿಯಲ್ಲಿ ಈಗ ಏನು ಆಗಿದೆಯೋ ಅದಕ್ಕೆ ನಾವು ತಲೆಬಾಗುತ್ತೇವೆ. ಆದರೆ ನನ್ನ ಮಗನ ಕೊಲೆ ಪ್ರಕರಣದಲ್ಲಿ ನಮಗೆ ನ್ಯಾಯ ಬೇಕೆ ಹೊರತು ಬೇರೇನೂ ಬೇಡ ಎಂದರು.

ಹಾಗೆಯೇ ಸರ್ಕಾರ ಕಡೆಯಿಂದ ತಮ್ಮ ಸೊಸೆಗೆ ಖಾಯಂ ನೌಕರಿ ಕೊಡಬೇಕೆಂದು ಮನವಿ ಮಾಡಿದರು.

ದರ್ಶನ್‌ಗೆ ಜಾಮೀನು ಸಿಕ್ಕಿದೆ. ಒಂದು ವೇಳೆ ಅವರು ನಿಮ್ಮ ಜೊತೆ ಮಾತುಕತೆಗೆ ಬಂದರೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಕಾಶಿನಾಥ್‌ ಅವರು, ಅದರ ಬಗ್ಗೆ ಯೋಚನೆ ಮಾಡಿಲ್ಲ. ಅವರ ಜೊತೆ ಮಾತಾಡುವ ಅಪೇಕ್ಷೇಯೂ ಇಲ್ಲ ಎಂದು ಹೇಳಿದರು.

ಜಾಮೀನು ಸಿಕ್ಕಿರುವುದಕ್ಕೆ ಸಿಎಂ ಭೇಟಿಯಾಗುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ನಮ್ಮ ಹಿತೈಷಿಗಳು, ಹಿರಿಯರ ಜೊತೆ ಚರ್ಚಿಸಿ ನಂತರ ಏನು ಮಾಡಬೇಕೆಂದು ನಿರ್ಧರಿಸುತ್ತೇವೆ ಎಂದರು.

Tags:
error: Content is protected !!