Mysore
25
light rain

Social Media

ಭಾನುವಾರ, 02 ಆಗಸ್ಟ್ 2026
Light
Dark

ಸಿಂಗ್‌ ನಿಧನ: ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ಸೇರಿದಂತೆ ಅಂತಿಮ ದರ್ಶನ ಪಡೆದ ಗಣ್ಯರು

ನವದೆಹಲಿ: ದೇಶದ ಆರ್ಥಿಕ ತಜ್ಞ ಹಾಗೂ ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್‌ ಅವರು ಉಸಿರಾಟದ ತೊಂದರೆಯಿಂದ ನಿಧನರಾಗಿದ್ದು, ಇವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ರಾಷ್ಟ್ರಪತಿ ಮುರ್ಮು
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಅನೇಕ ರಾಜಕೀಯ ಗಣ್ಯರು ಪಡೆದಿದ್ದಾರೆ.

ಮನಮೋಹನ ಸಿಂಗ್‌ ಅವರು ಗುರುವಾರ(ಡಿಸೆಂಬರ್‌.26) ಅನಾರೋಗ್ಯ ಸಮಸ್ಯೆಯಿಂದ ನಿಧನರಾಗಿದ್ದಾರೆ. ದೆಹಲಿಯ ಮೋತಿಲಾಲ್‌ ನೆಹರು ಮಾರ್ಗದಲ್ಲಿರುವ ಅವರ ನಿವಾಸದಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹಾಗೂ ಬಿಜೆಪಿ ರಾಜಾಧ್ಯಕ್ಷ ಜೆ.ಪಿ.ನಡ್ಡಾ ಅವರು ಪಡೆದು ಅಂತಿಮ ನಮನ ಸಲ್ಲಿಸಿದ್ದಾರೆ.

ಇನ್ನು ರಾಷ್ಟ್ರೀಯ ಶೋಕಾಚರಣೆ ಹಿನ್ನೆಲೆಯಲ್ಲಿ ನೂತನ ಸಂಸತ್‌ ಭವನದ ಮುಂದೆ  ರಾಷ್ಟ್ರಧ್ವಜವನ್ನು ಮಧ್ಯಕ್ಕೆ ಹಾರಿಸಲಾಗಿದೆ.

Tags:
error: Content is protected !!