Mysore
22
overcast clouds

Social Media

ಬುಧವಾರ, 19 ಆಗಸ್ಟ್ 2026
Light
Dark

ಹೈಕಮಾಂಡ್‌ ಸೂಚನೆ ಮೇರೆಗೆ ಪರಮೇಶ್ವರ್‌ ಕರೆದಿದ್ದ ಡಿನ್ನರ್‌ ಮೀಟಿಂಗ್‌ ರದ್ದು

ಬೆಂಗಳೂರು: ಗೃಹ ಸಚಿವ ಜಿ.ಪರಮೇಶ್ವರ್‌ ಅವರು ನಾಳೆಗೆ ಕರೆದಿದ್ದ ಡಿನ್ನರ್‌ ಮೀಟಿಂಗ್‌ ರದ್ದಾಗಿದೆ.

ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರ ಸೂಚನೆ ಮೇರೆಗೆ ನಾಳೆ ಕರೆದಿದ್ದ ಡಿನ್ನರ್‌ ಮೀಟಿಂಗ್‌ ರದ್ದಾಗಿದೆ.

ಈ ಬಗ್ಗೆ ಸ್ವತಃ ಗೃಹ ಸಚಿವ ಜಿ.ಪರಮೇಶ್ವರ್‌ ಅವರೇ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಮುಂದಿನ ದಿನಗಳಲ್ಲಿ ಸಭೆಯ ದಿನಾಂಕವನ್ನು ತಿಳಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಡಿನ್ನರ್‌ ಮೀಟಿಂಗ್‌ ಹವಾ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಬಿಜೆಪಿ ನಾಯಕರಿಗೆ ಒಳ್ಳೆಯ ಚರ್ಚೆಯ ವಿಷಯ ಸಿಕ್ಕಂತಾಗಿದೆ.

ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ವಿದೇಶ ಪ್ರವಾಸಕ್ಕೆ ತೆರಳಿದ ಸಂದರ್ಭದಲ್ಲೇ ಸಚಿವ ಸತೀಶ್‌ ಜಾರಕಿಹೊಳಿ ನಿವಾಸದಲ್ಲಿ ಡಿನ್ನರ್‌ ಮೀಟಿಂಗ್‌ ನಡೆದಿತ್ತು

ಈ ಬೆನ್ನಲ್ಲೇ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ಕೂಡ ತಮ್ಮ ಮನೆಯಲ್ಲಿ ಡಿನ್ನರ್‌ ಮೀಟಿಂಗ್‌ ಏರ್ಪಾಡು ಮಾಡಿದ್ದರು. ಆದರೆ ಈಗ ಹೈಕಮಾಂಡ್‌ ಸೂಚನೆ ಮೇರೆಗೆ ಡಿನ್ನರ್‌ ಮೀಟಿಂಗ್‌ ರದ್ದು ಮಾಡಿದ್ದಾರೆ.

ಈ ಎಲ್ಲಾ ಬೆಳವಣಿಗೆಯ ನಡುವೆ ರಾಜ್ಯ ಕಾಂಗ್ರೆಸ್‌ನಲ್ಲಿ ಕೊಂಚ ಬಿರುಕು ಉಂಟಾಗಿದೆ ಎಂದು ಹೇಳಲಾಗುತ್ತಿದ್ದು, ಕಾಂಗ್ರೆಸ್‌ ಹೈಕಮಾಂಡ್‌ ಮಧ್ಯ ಪ್ರವೇಶ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

 

Tags:
error: Content is protected !!