ಚಿಕ್ಕಮಗಳೂರು: ನಾಳೆ ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಮೋಸ್ಟ್ ವಾಂಟೆಡ್ ಆರು ಮಂದಿ ನಕ್ಸಲರು ಶರಣಾಗಲು ನಿರ್ಧರಿಸಿದ್ದಾರೆ.
ದಕ್ಷಿಣ ಭಾರತದ ನಾಲ್ಕು ರಾಜ್ಯಗಳಿಗೆ ಬೇಕಾಗಿದ್ದ ಆರು ಮಂದಿ ನಕ್ಸಲರು ನಾಳೆ ಚಿಕ್ಕಮಗಳೂರು ಜಿಲ್ಲಾಡಳಿತಕ್ಕೆ ಶರಣಾಗತರಾಗಲಿದ್ದಾರೆ.
ಇನ್ನು ರಾಜ್ಯ ಸರ್ಕಾರ ನಕ್ಸಲರ ಶರಣಾಗತಿ ಪ್ರಕ್ರಿಯೆಯನ್ನು ಈಗಾಗಲೇ ಮುಗಿಸಿದೆ ಎನ್ನಲಾಗಿದೆ.
ದಕ್ಷಿಣ ಕನ್ನಡದ ಸುಂದರಿ, ಚಿಕ್ಕಮಗಳೂರಿನ ಮುಂಡಗಾರು ಲತಾ, ವನಜಾಕ್ಷಿ, ತಮಿಳುನಾಡಿನ ಕೆ ವಸಂತ ಅಲಿಯಾಸ್ ರಮೇಶ್, ಕೇರಳದ ಜೀಶ, ಆಂಧ್ರಪ್ರದೇಶದ ಮಾರೆಪ್ಪ ಅರೋಲಿ ಶರಣಾಗತರಾಗುವ ನಕ್ಸಲರು ಎಂಬ ಮಾಹಿತಿ ಲಭ್ಯವಾಗಿದೆ.





