Mysore
24
scattered clouds

Social Media

ಸೋಮವಾರ, 16 ಫೆಬ್ರವರಿ 2026
Light
Dark

ಕೇಂದ್ರದಿಂದ ತೆರಿಗೆ ಪಾಲು ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ: ಡಿಸಿಎಂ ಡಿ.ಕೆ.ಶಿವಕುಮಾರ್‌ಕಿಡಿ

ಚಿಕ್ಕಮಗಳೂರು/ಶೃಂಗೇರಿ: ಕೇಂದ್ರ ಸರ್ಕಾರದಿಂದ ದೇಶದ 28 ರಾಜ್ಯಗಳಿಗೂ ತೆರಿಗೆ ಹಂಚಿಕೆ ಮಾಡಿದ್ದು, ಕರ್ನಾಟಕ ರಾಜ್ಯಕ್ಕೆ ತೆರಿಗೆ ನೀಡುವಲ್ಲಿ ಅನ್ಯಾಯ ಮಾಡಿದೆ. ಹಾಗಾಗಿ ನಮ್ಮ ಹಕ್ಕಿಗೆ ಮತ್ತು ನಮ್ಮ ತೆರಿಗೆಗೆ ಹೋರಾಟ ಮಾಡಬೇಕಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಕಿಡಿಕಾರಿದ್ದಾರೆ.

ಶೃಂಗೇರಿಯಲ್ಲಿ ಇಂದು(ಜನವರಿ.11) ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಸರ್ಕಾರದಿಂದ ನಿನ್ನೆ(ಜ.10) ಪ್ರತಿಯೊಂದು ರಾಜ್ಯಗಳಿಗೂ ತೆರಿಗೆ ಹಣವನ್ನು ಹಂಚಿಕೆ ಮಾಡಿದ್ದು, ಕರ್ನಾಟಕ ರಾಜ್ಯಕ್ಕೆ 6310.40 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಅದರಲ್ಲಿ ನಾನು ಉತ್ತರ ಪ್ರದೇಶದ ಬಗ್ಗೆ ಮಾತನಾಡುವುದಿಲ್ಲ, ಏಕೆಂದರೆ ಅದು ದೊಡ್ಡ ರಾಜ್ಯ. ಆದರೆ ಕೇಂದ್ರದಿಂದ ನಮ್ಮ ರಾಜ್ಯಕ್ಕೆ ಸರಿಯಾದ ಅನುಪಾತದಲ್ಲಿ ತೆರಿಗೆ ಪಾಲು ಹಂಚಿಕೆಯಾಗದೇ ಅನ್ಯಾಯವಾಗಿದೆ. ಹೀಗಿದ್ದರೂ ರಾಜ್ಯದ ಸಂಸದರೂ ಈ ಬಗ್ಗೆ ಪ್ರಶ್ನಿಸಿದೇ ಮೌನವಹಿಸಿರುವರು ಎಂದು ವಾಗ್ದಾಳಿ ನಡೆಸಿದ್ದಾರೆ.

ನಮ್ಮ ರಾಜ್ಯಕ್ಕೆ ಆಗಿರುವ ಅನ್ಯಾಯದ ಬಗ್ಗೆ ಪರಿಶೀಲನೆ ಮಾಡುತ್ತೇವೆ. ಅಲ್ಲದೇ ಮುಖ್ಯಮಂತ್ರಿಗಳು ಸಹ ದೊಡ್ಡ ಅಧ್ಯಯನ ನಡೆಸುತ್ತಿದ್ದಾರೆ. ಹೀಗಾಗಿ ನಮ್ಮ ಹಕ್ಕಿಗಾಗಿ ನಮ್ಮ ತೆರಿಗೆ ಹೋರಾಟ ನಡೆಸಬೇಕು ಎಂದು ಹೇಳಿದ್ದಾರೆ.

 

Tags:
error: Content is protected !!