Mysore
21
clear sky

Social Media

ಬುಧವಾರ, 04 ಮಾರ್ಚ್ 2026
Light
Dark

ರಾಷ್ಟ್ರೀಯ ಯುವ ದಿನ: ವಾಕಥಾನ್‌ನಲ್ಲಿ ಭಾಗಿಯಾದ ಸಂಸದ ಯದುವೀರ್‌

ಮೈಸೂರು: ರಾಷ್ಟ್ರೀಯ ಯುವ ದಿನ ಅಂಗವಾಗಿ ಮೈಸೂರಿನ ಬಿಜೆಪಿ ಯುವ ಮೋರ್ಚಾ ವತಿಯಿಂದ ಆಯೀಜಿಸಲಾಗಿದ್ದ ವಾಕಥಾನ್‌ನಲ್ಲಿ ಯುವ ಜನತೆಯೊಂದಿಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಭಾಗಿಯಾಗಿ ಹೆಜ್ಜೆ ಹಾಕಿದ್ದಾರೆ.

ನಗರದಲ್ಲಿ ಇಂದು(ಜನವರಿ.12) ಸ್ವಾಮಿ ವಿವೇಕಾನಂದ ಜಯಂತಿ ಹಾಗೂ ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ವಿವೇಕ ನಡಿಗೆಯಲ್ಲಿ (ವಾಕಥಾನ್‌) ಭಾಗವಹಿಸಿ, ಯುವ ಜನತೆಗೆ ಶುಭಾಶಯ ಕೋರಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾಮಿ ವಿವೇಕಾನಂದರು ಸಿಡಿಲ ಸನ್ಯಾಸಿ, ಭವ್ಯ ಭಾರತ ನಿರ್ಮಾಣದ ಸಂಕಲ್ಪ ತೊಟ್ಟ ಅದಮ್ಯ ಚೇತನ ವ್ಯಕ್ತಿಯಾಗಿದ್ದರು. ಅವರ ಹುಟ್ಟು ಹಬ್ಬದ ದಿನದ ಪ್ರಯುಕ್ತ ರಾಷ್ಟ್ರೀಯ ಯುವ ದಿನವನ್ನು ಆಚರಿಸುತ್ತಿರುವುದು ಹೆಮ್ಮೆಯ ವಿಚಾರವಾಗಿದೆ. ಸ್ವಾಮಿ ವಿವೇಕಾನಂದರ ಆದರ್ಶ ಮತ್ತು ತತ್ವಗಳನ್ನು ಇಂದಿನ ಯುವ ಜನತೆ ಅಳವಡಿಸಿಕೊಂಡು ಅವುಗಳನ್ನು ಪಾಲಿಸಬೇಕು ಎಂದು ಹೇಳಿದ್ದಾರೆ.

Tags:
error: Content is protected !!